ಟೋಪಿ ಧರಿಸಿ ಮುಸ್ಲಿಂ ಬಾಂಧವರ ಜೊತೆ ನಮಾಜ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಎಲ್ಲರೂ ಅಲ್ಲಾನಲ್ಲಿ ಪ್ರಾರ್ಥನೆ ಮಾಡಬೇಕು.

ಟೋಪಿ ಧರಿಸಿ ಮುಸ್ಲಿಂ ಬಾಂಧವರ ಜೊತೆ ನಮಾಜ್ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
|

Updated on:Jul 10, 2022 | 12:08 PM

ಬೆಂಗಳೂರು: ಇಂದು ದೇಶದಾದ್ಯಂತ ಮುಸ್ಲಿಂ (Muslim) ಬಾಂಧವರು ಬಕ್ರೀದ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದರು. ತಲೆಗೆ ಟೋಪಿ ಧರಿಸಿ ಸಿದ್ದರಾಮಯ್ಯ ಅಲ್ಲಾನನ್ನು ಸ್ಮರಿಸಿದರು. ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಎಲ್ಲರೂ ಅಲ್ಲಾನಲ್ಲಿ ಪ್ರಾರ್ಥನೆ ಮಾಡಬೇಕು. ನಾನೂ ಕೂಡಾ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸಿದ್ದರಾಮಯ್ಯ ದೇವಾಲಯಕ್ಕೆ ಭೇಟಿ ನೀಡಿದರು. ಚಾಮರಾಜಪೇಟೆ ಮಲೆಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯಗೆ ಶಾಸಕ ಜಮೀರ್ ಅಹ್ಮದ್‌ ಖಾನ್‌, ಪುತ್ರ ಸಾಥ್‌ ನೀಡಿದರು. ದೇವಾಲಯದಲ್ಲಿ ಪುರೋಹಿತರು ಸಿದ್ದು, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದರು.

ಇದನ್ನೂ ಓದಿ: ಬಾಗಲಕೋಟೆಯ ಕೆರೂರಿನಲ್ಲಿ ಗುಂಪು ಘರ್ಷಣೆ ಪ್ರಕರಣ: ಚಾಕು ಇರಿತಕ್ಕೆ ಒಳಗಾದ ಅರುಣ ಕಟ್ಟಿಮನಿ ಮೊದಲ ಪ್ರತಿಕ್ರಿಯೆ

ಇದನ್ನೂ ಓದಿ
Image
Rajnath Singh Birthday Special: ಇಂದು ರಕ್ಷಣಾ ಸಚಿವ ರಾಜನಾಥ್ ಹುಟ್ಟುಹಬ್ಬ; 10 ಕುತೂಹಲಕರ ಮಾಹಿತಿ ಇಲ್ಲಿದೆ
Image
ಮಳೆಗಾಲದಲ್ಲಿ ಮದುವೆಯಾಗ್ತಿರೋ ಹೆಣ್ಣುಮಕ್ಕಳಿಗೆ ಕಾಂತಿಯುತ ತ್ವಚೆ ಪಡೆಯಲು ಇಲ್ಲಿವೆ ಟಿಪ್ಸ್
Image
IOCL Recruitment 2022: ಐಒಸಿಎಲ್​ ನೇಮಕಾತಿ: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
Image
Priya Anand: ಮಾದಕ ನೋಟದಿಂದ ಗಮನ ಸೆಳೆದ ನಟಿ ಪ್ರಿಯಾ ಆನಂದ್

ಬಕ್ರೀದ್ ಹಬ್ಬ ಹಿನ್ನೆಲೆ ಚಾಮರಾಜಪೇಟೆ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್ ಮಾಡಿದರು. ಮುಂಜಾಗ್ರತಾ ಕ್ರಮವಾಗಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

ಸಿದ್ದರಾಮೋತ್ಸವದ ಬಗ್ಗೆ ಜೋಶಿ‌ ಲೇವಡಿ: ಸಿದ್ದರಾಮೋತ್ಸವದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿದ್ದರಾಮೋತ್ಸವ ಮಾಡಲಿ. ನಾವು ಸಿದ್ದರಾಮಯ್ಯ ಅಂತ್ಯೋತ್ಸವ ಮಾಡುತ್ತೇವೆ ಅಂತಾ‌ ಒಳಗೊಳಗೆ ಮಾತಾಡುತ್ತಿದ್ದಾರೆ. ಮಧ್ಯವರ್ತಿಗಳ ಮೂಲಕ ಅನೇಕ ಸ್ಕೀಂಗಳಲ್ಲಿ ಕಾಂಗ್ರೆಸ್​ನವರು ದುಡ್ಡು ಹೊಡೀತಿದ್ದರು.ಈಗ ಅದೆಲ್ಲಾ ನಿಂತು‌ ಹೋಗಿದೆ ಎಂದು ಕಾಂಗ್ರೆಸ್​ಗೆ‌ ಕೇಂದ್ರ ಸಚಿವ‌ ಪ್ರಹ್ಲಾದ್‌ ಜೋಶಿ‌ ಕೌಂಟರ್ ಕೊಟ್ಟಿದ್ದಾರೆ.

ಇದನ್ನೂ ಓದಿ: Rajnath Singh Birthday Special: ಇಂದು ರಕ್ಷಣಾ ಸಚಿವ ರಾಜನಾಥ್ ಹುಟ್ಟುಹಬ್ಬ; 10 ಕುತೂಹಲಕರ ಮಾಹಿತಿ ಇಲ್ಲಿದೆ

Published On - 11:55 am, Sun, 10 July 22

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ