AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಆಪ್ತನ ಬಣ, ಶಾಸಕ ಬಣ ಬಡಿದಾಟದ ಮಧ್ಯ ಅಧಿಕಾರಕ್ಕೇರಿದ ಜೆಡಿಎಸ್

ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಗುಳೇದಗುಡ್ಡ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್​ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದಿನ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್​‌ಗೆ ಮುಖಭಂಗ ಉಂಟಾಗಿದೆ. ಎದುರಾಳಿಗಳೇ ಇಲ್ಲದೇ ಜ್ಯೋತಿ ಗೋವಿನಕೊಪ್ಪ ಗೆದ್ದು ಬೀಗಿದ್ದಾರೆ.

ಸಿದ್ದರಾಮಯ್ಯ ಆಪ್ತನ ಬಣ, ಶಾಸಕ ಬಣ ಬಡಿದಾಟದ ಮಧ್ಯ ಅಧಿಕಾರಕ್ಕೇರಿದ ಜೆಡಿಎಸ್
ಸಿದ್ದರಾಮಯ್ಯ ಆಪ್ತನ ಬಣ , ಶಾಸಕ ಬಣ ಬಡಿದಾಟದ ಮಧ್ಯ ಅಧಿಕಾರಕ್ಕೇರಿದ ಜೆಡಿಎಸ್
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 30, 2024 | 5:58 PM

Share

ಬಾಗಲಕೋಟೆ, ಆಗಸ್ಟ್​ 30: ಜಿಲ್ಲೆಯ ಬಾದಾಮಿ ಕ್ಷೇತ್ರದ ಗುಳೇದಗುಡ್ಡ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತನ ಬಣ ಮತ್ತು ಬಾದಾಮಿ ಶಾಸಕ ಬಣದ ಮಧ್ಯೆದ ಪೈಪೋಟಿಯಲ್ಲಿ ಜೆಡಿಎಸ್​​ ಗದ್ದುಗೆ ಅಲಂಕರಿಸಿದೆ. ಆ ಮೂಲಕ ಸಿದ್ದರಾಮಯ್ಯನವರ ಹಿಂದಿನ ಬಾದಾಮಿಯ ಕ್ಷೇತ್ರದಲ್ಲಿ ಕಾಂಗ್ರೆಸ್​ಗೆ ಮುಖಭಂಗ ಉಂಟಾಗಿದೆ.

ಕಾಂಗ್ರೆಸ್​ನ ಇಬ್ಬರೂ ಆಕಾಂಕ್ಷಿಗಳ ನಾಮಪತ್ರ ತಿರಸ್ಕೃತ

ನಾಮಪತ್ರದಲ್ಲಿ ಯಾವ ಸ್ಥಾನಕ್ಕೆ ಸ್ಪರ್ಧೆ ಎಂದು ನಮೂದಿಸದೆ ಯಡವಟ್ಟಾಗಿದ್ದು, ಕಾಂಗ್ರೆಸ್​ನ ಇಬ್ಬರೂ ಆಕಾಂಕ್ಷಿಗಳ ನಾಮಪತ್ರ ತಿರಸ್ಕೃತವಾಗಿದೆ. ಸಿದ್ದರಾಮಯ್ಯ ಆಪ್ತ ಹೊಳೆಬಸು ಶೆಟ್ಟರ್ ಬಣದ ಜ್ಯೋತಿ ಆಲೂರು ಮತ್ತು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಬಣದ ವಂದನಾ ಭಟ್ಟಡ ಮಧ್ಯೆ ಪೈಪೋಟಿಗೆ ಕಾರಣವಾಗಿತ್ತು. ಆದರೆ ನಾಮಪತ್ರದಲ್ಲಿ ಇಬ್ಬರೂ ಅಧ್ಯಕ್ಷ ಸ್ಥಾನಕ್ಕೆ ಎಂದು ಉಲ್ಲೇಖಿಸದೆ ಯಡವಟ್ಟು ಮಾಡಿಕೊಂಡಿದ್ದಾರೆ. ಇಬ್ಬರ ಮಧ್ಯೆ ಐದು ಸ್ಥಾನ ಹೊಂದಿರುವ ಜೆಡಿಎಸ್​ಗೆ ಪಟ್ಟ ಒಲಿದಿದೆ.

ಇದನ್ನೂ ಓದಿ: ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಕೇಸ್​: ಸಿಐಡಿಗೆ ಹಸ್ತಾಂತರ

ಎದುರಾಳಿಗಳೇ ಇಲ್ಲದೇ ಜ್ಯೋತಿ ಗೋವಿನಕೊಪ್ಪ ಗೆದ್ದು ಬೀಗಿದ್ದಾರೆ. ಆ ಮೂಲಕ ಬಹುಮತವಿದ್ದರೂ ಕಾಂಗ್ರೆಸ್ ಪುರಸಭೆ ಗದ್ದುಗೆ ಕಳೆದುಕೊಂಡಿದೆ. ಇನ್ನು ಉಪಾಧ್ಯಕ್ಷ ಸ್ಥಾನ ಎಸ್​ಸಿಗೆ‌ ಮೀಸಲಿಡಲಾಗಿದ್ದು, ಬಿಜೆಪಿ-ಜೆಡಿಎಸ್​ನಲ್ಲಿ ಎಸ್​ಸಿ ಅಭ್ಯರ್ಥಿ ಯಾರೂ ಇಲ್ಲ.

ಇದನ್ನೂ ಓದಿ: ಬಿಜೆಪಿ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ಬಿಡುಗಡೆ ಆಗಲಿದೆ: ಮಾಜಿ ಶಾಸಕ ಆನಂದ‌ ನ್ಯಾಮಗೌಡ

ಕಾಂಗ್ರೆಸ್​ನಲ್ಲಿ ರಾಜವ್ವ ಹೆಬ್ಬಳ್ಳಿ ಹಾಗೂ ರಾಜವ್ವ ಮಗ ರಾಜಶೇಖರ ಹೆಬ್ಬಳ್ಳಿ ಇಬ್ಬರು ಮಾತ್ರ ಎಸ್​ಸಿ ಅಭ್ಯರ್ಥಿಗಳು. ಅಧ್ಯಕ್ಷ ಸ್ಥಾನಕ್ಕೆ ತಮಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡದ ಹಿನ್ನೆಲೆ ಉಪಾಧ್ಯಕ್ಷ ಸ್ಥಾನಕ್ಕೂ ನಾಮಪತ್ರ ಸಲ್ಲಿಸಲಿಲ್ಲ. ಇದರಿಂದ ಅಭ್ಯರ್ಥಿಗಳೇ ಇಲ್ಲದ ಹಿನ್ನೆಲೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿಲ್ಲ. ಕಾಂಗ್ರೆಸ್: 15, ಬಿಜೆಪಿ: 2, ಜೆಡಿಎಸ್: 5, ಪಕ್ಷೇತರ: 1 ಒಟ್ಟು 23 ಗುಳೇದಗುಡ್ಡ ಪುರಸಭೆ ಸದಸ್ಯರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More