AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.

Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 7:23 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಇದೀಗ ಈ ಬಗ್ಗೆ ಟ್ವಿಟರ್​​ನಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರೇ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ್ನು ಸ್ಥಾಪಿಸಲು ಅನುಮತಿ ಮತ್ತು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ರಾಯಚೂರು ಮಹತ್ವಾಕಾಂಕ್ಷೆಯ ಜಿಲ್ಲೆ. ಇತರ ಪ್ರದೇಶಗಳಿಗೆ ಹೋಲಿಸಿದರೆ ಆರೋಗ್ಯ, ಶಿಕ್ಷಣ ಮತ್ತು ತಲಾ ಆದಾಯದ ಮಟ್ಟಗಳು ಇನ್ನೂ ಕೆಳಮಟ್ಟದಲ್ಲಿವೆ. ಈ ಪ್ರದೇಶವು ಭೌಗೋಳಿಕ ಅನಾನುಕೂಲತೆಯನ್ನು ಹೊಂದಿದೆ, ಏಕೆಂದರೆ ಇದು ಹವಾಮಾನ ವೈಪರೀತ್ಯಗಳು ಉಂಟಾಗುತ್ತದೆ. ಇಂತಹ ಸಮಸ್ಯೆಗಳನ್ನು ರಾಯಚೂರಿಗೆ ಅನುಭವಿಸುತ್ತಿದ್ದಾರ, ಈ ಕಾರಣಕ್ಕೆ ಜಿಲ್ಲೆಯಲ್ಲಿ ಸದೃಢವಾದ ವೈದ್ಯಕೀಯ ಸಂಸ್ಥೆಗಳ ಅಗತ್ಯ ಇದೆ. ಏಮ್ಸ್ ಸ್ಥಾಪನೆಯು ಈ ಪ್ರದೇಶದಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ನೀಡಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ವೈದ್ಯಕೀಯ ಕಾಲೇಜುಗಳು 2014 ರಿಂದ ದ್ವಿಗುಣಗೊಂಡಿದೆ, AIIMS 7 ರಿಂದ 22 ಕ್ಕೆ ಏರಿದೆ; ಕೇಂದ್ರ

ಈ ಪ್ರಸ್ತಾವನೆ ಕಾರ್ಯರೂಪಕ್ಕೆ ಬರುವಂತೆ ಜನ ಹಾಗೂ ಜನಪ್ರತಿನಿಧಿಗಳಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಕಲ್ಯಾಣ ಕರ್ನಾಟಕ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ.ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಹಾಗೂ ನನ್ನ ಸಹೋದ್ಯೋಗಿ ಎನ್.ಎಸ್.ಬೋಸರಾಜು, ಸಹ ಈ ಕನಸನ್ನು ನನಸಾಗಿಸಲು ಒತ್ತಾಯಿಸಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಕೈಗೊಳ್ಳುತ್ತೀರಾ ಎಂಬ ನಂಬಿಕೆ ನನಗೆ ಇದೆ. ಈ ನಿಟ್ಟಿನಲ್ಲಿ ಸಂಬಂಧಿಸಿರುವ ಅಧಿಕಾರಿಗಳ ಗಮನಕ್ಕೆ ತರುವಂತೆ ಮತ್ತು ನಿಮ್ಮ ನಿರ್ದೇಶನದಂತೆ ಈ ಕಾರ್ಯ ನಡೆಯಬೇಕಿದೆ, ನಿಮ್ಮ ಉತ್ತರಕ್ಕೆ ನಾನು ಎದುರು ನೋಡುತ್ತಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ