AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19ನೇ ವಯಸ್ಸಿನಲ್ಲಿ ಫಸ್ಟ್ ಪುಸ್ತಕ ಬರೆದು ತಮ್ಮ ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದ ಮಹಾನ್ ಸಂತ ಸಿದ್ದೇಶ್ವರ ಸ್ವಾಮೀಜಿ

ಈಗಿನ ಕಾಲದಲ್ಲಿ ಬೇರೆಯವರಿಂದ ಬುಕ್ ಬರೆಯಿಸಿ ತಮ್ಮ ಹೆಸರಿನಲ್ಲಿ ಪ್ರಕಟಿಸಿಕೊಳ್ಳುವವರು ಇದ್ದಾರೆ. ಆದರೆ, ಸಿದ್ದೇಶ್ವರ ಸ್ವಾಮೀಜಿ ಈ ಹಿಂದೆ ತಾವು 19ನೇ ವಯಸ್ಸಿನಲ್ಲೇ ಮೊದಲ ಪುಸ್ತುಕವನ್ನು ಬರೆದು ತಮ್ಮ ಗುರುಗಳ ಹೆಸರಿನಲ್ಲಿ ಪ್ರಕಟಿಸಿದ್ದರು.

19ನೇ ವಯಸ್ಸಿನಲ್ಲಿ ಫಸ್ಟ್ ಪುಸ್ತಕ ಬರೆದು ತಮ್ಮ ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದ ಮಹಾನ್ ಸಂತ ಸಿದ್ದೇಶ್ವರ ಸ್ವಾಮೀಜಿ
ಸಿದ್ದೇಶ್ವರ ಸ್ವಾಮೀಜಿImage Credit source: siddheshwar swamiji
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 03, 2023 | 1:27 AM

Share

ವಿಜಯಪುರ: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು(Siddeshwara Swamiji) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ವೈಕುಂಠ ಏಕಾದಶಿ ದಿನದಂದೇ(ಜನವರಿ 02) ಅದು ಸೂರ್ಯನ ಜೊತೆಗೆ ಅಸ್ತಂಗತರಾಗಿದ್ದಾರೆ. ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ, 19 ವಯಸ್ಸಿನಲ್ಲೇ ಒಂದು ಪುಸ್ತಕವನ್ನು ಬರೆದಿದ್ದರಿ. ವಿಶೇಷ ಏನು ಅಂದ್ರೆ ಆ ಪುಸ್ತಕ ತಮ್ಮ ಹೆಸರಿನಲ್ಲಿ ಪ್ರಕಟಿಸಲಿಲ್ಲ ಬದಲಾಗಿ ತಮ್ಮ ಗುರುಗಳ ಹೆಸರಿನಲ್ಲಿ ಪ್ರಕಟಿಸಿದ್ದರು.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು

ಹೌದು.. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸ್​ ಮಾಡಿದ್ದರು. ಆದ್ರೆ, ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ಧೇಶ್ವರರರು ಕೊಲ್ಹಾಪುರದಲ್ಲಿ ಶ್ರೀ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು. ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ.

ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ. ಆತ ಮಹಾ ಬುದ್ದಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿದೆ. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು. ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆಯ ಬಗ್ಗೆ, ಉಪನಿಷತ್ತುಗಳ ಬಗ್ಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಙಾನದಿಗಂತವನ್ನು ವಿಸೃತಗೊಳಿಸಿದರು. ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ,ಯೋಗಸೂತ್ರ,ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋದಪ್ರದ ಪ್ರವಚನಗಳನ್ನು ನೀಡುತ್ತಿದ್ದಾರೆ. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯ.

ಇದನ್ನೂ ಓದಿ: Siddheshwara swamiji funeral: ಉಸಿರು ನಿಲ್ಲಿಸಿದ ನಡೆದಾಡುವ ದೇವರು ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?