AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತನೇ ತರಗತಿವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ವಲಸಿಗ ಪೋಷಕರ ವಿರೋಧ; ಸಹಿ ಸಂಗ್ರಹ ಅಭಿಯಾನ ಆರಂಭ

ಈ ವರ್ಷ 10ನೇ ತರಗತಿಯಲ್ಲಿ ಇರುವವರು ಪರೀಕ್ಷೆ ಎದುರಿಸುವುದು ಹೇಗೆ? ಮೊದಲ ಹಂತದಿಂದ ಕನ್ನಡ ಕಲಿತು ಬೋರ್ಡ್ ಎಕ್ಸಾಂ ಎದುರಿಸುವುದು ಹೇಗೆ? ವಿದ್ಯಾರ್ಥಿಗಳ ಫಲಿತಾಂಶಕ್ಕೆ ಇದರಿಂದ ಸಾಕಷ್ಟು ಹಿನ್ನೆಡೆಯಾಗುತ್ತದೆ ಎಂದು ವಲಸಿಗ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹತ್ತನೇ ತರಗತಿವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ವಲಸಿಗ ಪೋಷಕರ ವಿರೋಧ; ಸಹಿ ಸಂಗ್ರಹ ಅಭಿಯಾನ ಆರಂಭ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 10, 2021 | 5:33 PM

ಬೆಂಗಳೂರು: ಹತ್ತನೇ ತರಗತಿಯವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ಪೋಷಕರ ವಿರೋಧ ವ್ಯಕ್ತವಾಗಿದೆ. ಕನ್ನಡ ಕಲಿಕೆ ವಿರೋಧಿಸಿ ಅರ್ಜಿ ಸಲ್ಲಿಸಲು ಸಹಿ ಸಂಗ್ರಹ ಅಭಿಯಾನವನ್ನು ವಲಸಿಗ ಪೋಷಕರು ಈಗಾಗಲೇ ಆರಂಭಿಸಿದ್ದಾರೆ. ಈಗಾಗಲೇ ವಲಸಿಗ ಪೋಷಕರಿಂದ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಯಲಹಂಕ ಪ್ರೆಸಿಡೆನ್ಸಿ ಶಾಲೆ ಪೋಷಕರಿಂದ ಸಹಿ ಸಂಗ್ರಹ ನಡೆಯುತ್ತಿದೆ.

ಕನ್ನಡ ಭಾಷೆಯ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಶೈಕ್ಷಣಿಕವಾಗಿ ಕನ್ನಡ ಕಡ್ಡಾಯವಾದರೆ ಕಷ್ಟವಾಗುತ್ತದೆ. ಕನ್ನಡದ ಪರಿಚಯ ಇಲ್ಲದ ಹೈಸ್ಕೂಲ್ ಮಕ್ಕಳ ಪಾಡೇನು? ಈ ವರ್ಷ 10ನೇ ತರಗತಿಯಲ್ಲಿ ಇರುವವರು ಪರೀಕ್ಷೆ ಎದುರಿಸುವುದು ಹೇಗೆ? ಮೊದಲ ಹಂತದಿಂದ ಕನ್ನಡ ಕಲಿತು ಬೋರ್ಡ್ ಎಕ್ಸಾಂ ಎದುರಿಸುವುದು ಹೇಗೆ? ವಿದ್ಯಾರ್ಥಿಗಳ ಫಲಿತಾಂಶಕ್ಕೆ ಇದರಿಂದ ಸಾಕಷ್ಟು ಹಿನ್ನೆಡೆಯಾಗುತ್ತದೆ ಎಂದು ವಲಸಿಗ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೀಗ ಪೋಷಕರು ಚೇಂಜ್‌ ಆರ್ಗನೈಸೇಶನ್ ವೆಬ್​ಸೈಟ್​ನಲ್ಲಿ ಸಹಿ ಮಾಡುವ ಅಭಿಯಾನ ಆರಂಭಿಸಿದ್ದಾರೆ. ಪ್ರಾಥಮಿಕ ಶಿಕ್ಷಣದಿಂದ ಹತ್ತನೇ ತರಗತಿವರೆಗು ಕನ್ನಡ ಕಡ್ಡಾಯ ಮಾಡಲಾಗಿದೆ. ಈ ಶೈಕ್ಷಣಿಕ ವರ್ಷದಿಂದ ಈ ನಿಯಮ ಆರಂಭವಾಗಲಿದೆ. ಈಗ ಓದಲು ಶುರು ಮಾಡಿರುವ ಮಕ್ಕಳಿಗೆ ಇದರಿಂದ ತೊಂದರೆ ಆಗುವುದಿಲ್ಲ. ಆದರೆ, ಮೊದಲಿಂದಲೂ ಕನ್ನಡದ ಪರಿಚಯವೇ ಇಲ್ಲದ ಹೈಸ್ಕೂಲ್ ಮಕ್ಕಳ ಪಾಡೇನು? ಎಂದು ಪೋಷಕರು ಪ್ರಶ್ನಿಸಿದ್ದಾರೆ.

ಈಗಾಗ್ಲೇ ನೂರಾರು ವಲಸಿಗ ಪೋಷಕರು ಈ ಪಿಟಿಷನ್​ಗೆ ಸಹಿ‌ ಮಾಡಿದ್ದಾರೆ. ಮತ್ತೊಂದೆಡೆ, ಹಾಗಾದ್ರೆ ಕನ್ನಡ ಕಲಿಯಲು ಮಾತಾನಾಡಲು ಇಚ್ಛಿಸದವರು ಕರ್ನಾಟಕದಲ್ಲಿರಬೇಕ? ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿದ್ದರು ಕನ್ನಡದ ವಿರೋಧ ಏಕೆ? ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಈ ರಾಜ್ಯದಲ್ಲಿರಬೇಕಾದರೆ ಕನ್ನಡ ಭಾಷಾ ಜ್ಞಾನವಿರಬೇಕು. ಆದರೆ ಶೈಕ್ಷಣಿಕವಾಗಿ ಕನ್ನಡ ಕಡ್ಡಾಯವಾದರೆ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ, ಹರಿಪ್ರಿಯ ರಾಮಕೃಷ್ಣ ಎನ್ನುವವರು ಪಿಟಿಷನ್ ಶುರು ಮಾಡಿದ್ದಾರೆ. ಎರಡೂವರೆ ಸಾವಿರ ಸಹಿಗಳಾದರೆ ಅರ್ಜಿ ಮುಖ್ಯಮಂತ್ರಿ ಬಳಿ ಹೋಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್