AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತನೇ ತರಗತಿವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ವಲಸಿಗ ಪೋಷಕರ ವಿರೋಧ; ಸಹಿ ಸಂಗ್ರಹ ಅಭಿಯಾನ ಆರಂಭ

ಈ ವರ್ಷ 10ನೇ ತರಗತಿಯಲ್ಲಿ ಇರುವವರು ಪರೀಕ್ಷೆ ಎದುರಿಸುವುದು ಹೇಗೆ? ಮೊದಲ ಹಂತದಿಂದ ಕನ್ನಡ ಕಲಿತು ಬೋರ್ಡ್ ಎಕ್ಸಾಂ ಎದುರಿಸುವುದು ಹೇಗೆ? ವಿದ್ಯಾರ್ಥಿಗಳ ಫಲಿತಾಂಶಕ್ಕೆ ಇದರಿಂದ ಸಾಕಷ್ಟು ಹಿನ್ನೆಡೆಯಾಗುತ್ತದೆ ಎಂದು ವಲಸಿಗ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹತ್ತನೇ ತರಗತಿವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ವಲಸಿಗ ಪೋಷಕರ ವಿರೋಧ; ಸಹಿ ಸಂಗ್ರಹ ಅಭಿಯಾನ ಆರಂಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 10, 2021 | 5:33 PM

Share

ಬೆಂಗಳೂರು: ಹತ್ತನೇ ತರಗತಿಯವರೆಗೂ ಕನ್ನಡ ಕಲಿಕೆ ಕಡ್ಡಾಯಕ್ಕೆ ಪೋಷಕರ ವಿರೋಧ ವ್ಯಕ್ತವಾಗಿದೆ. ಕನ್ನಡ ಕಲಿಕೆ ವಿರೋಧಿಸಿ ಅರ್ಜಿ ಸಲ್ಲಿಸಲು ಸಹಿ ಸಂಗ್ರಹ ಅಭಿಯಾನವನ್ನು ವಲಸಿಗ ಪೋಷಕರು ಈಗಾಗಲೇ ಆರಂಭಿಸಿದ್ದಾರೆ. ಈಗಾಗಲೇ ವಲಸಿಗ ಪೋಷಕರಿಂದ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ಯಲಹಂಕ ಪ್ರೆಸಿಡೆನ್ಸಿ ಶಾಲೆ ಪೋಷಕರಿಂದ ಸಹಿ ಸಂಗ್ರಹ ನಡೆಯುತ್ತಿದೆ.

ಕನ್ನಡ ಭಾಷೆಯ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಶೈಕ್ಷಣಿಕವಾಗಿ ಕನ್ನಡ ಕಡ್ಡಾಯವಾದರೆ ಕಷ್ಟವಾಗುತ್ತದೆ. ಕನ್ನಡದ ಪರಿಚಯ ಇಲ್ಲದ ಹೈಸ್ಕೂಲ್ ಮಕ್ಕಳ ಪಾಡೇನು? ಈ ವರ್ಷ 10ನೇ ತರಗತಿಯಲ್ಲಿ ಇರುವವರು ಪರೀಕ್ಷೆ ಎದುರಿಸುವುದು ಹೇಗೆ? ಮೊದಲ ಹಂತದಿಂದ ಕನ್ನಡ ಕಲಿತು ಬೋರ್ಡ್ ಎಕ್ಸಾಂ ಎದುರಿಸುವುದು ಹೇಗೆ? ವಿದ್ಯಾರ್ಥಿಗಳ ಫಲಿತಾಂಶಕ್ಕೆ ಇದರಿಂದ ಸಾಕಷ್ಟು ಹಿನ್ನೆಡೆಯಾಗುತ್ತದೆ ಎಂದು ವಲಸಿಗ ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೀಗ ಪೋಷಕರು ಚೇಂಜ್‌ ಆರ್ಗನೈಸೇಶನ್ ವೆಬ್​ಸೈಟ್​ನಲ್ಲಿ ಸಹಿ ಮಾಡುವ ಅಭಿಯಾನ ಆರಂಭಿಸಿದ್ದಾರೆ. ಪ್ರಾಥಮಿಕ ಶಿಕ್ಷಣದಿಂದ ಹತ್ತನೇ ತರಗತಿವರೆಗು ಕನ್ನಡ ಕಡ್ಡಾಯ ಮಾಡಲಾಗಿದೆ. ಈ ಶೈಕ್ಷಣಿಕ ವರ್ಷದಿಂದ ಈ ನಿಯಮ ಆರಂಭವಾಗಲಿದೆ. ಈಗ ಓದಲು ಶುರು ಮಾಡಿರುವ ಮಕ್ಕಳಿಗೆ ಇದರಿಂದ ತೊಂದರೆ ಆಗುವುದಿಲ್ಲ. ಆದರೆ, ಮೊದಲಿಂದಲೂ ಕನ್ನಡದ ಪರಿಚಯವೇ ಇಲ್ಲದ ಹೈಸ್ಕೂಲ್ ಮಕ್ಕಳ ಪಾಡೇನು? ಎಂದು ಪೋಷಕರು ಪ್ರಶ್ನಿಸಿದ್ದಾರೆ.

ಈಗಾಗ್ಲೇ ನೂರಾರು ವಲಸಿಗ ಪೋಷಕರು ಈ ಪಿಟಿಷನ್​ಗೆ ಸಹಿ‌ ಮಾಡಿದ್ದಾರೆ. ಮತ್ತೊಂದೆಡೆ, ಹಾಗಾದ್ರೆ ಕನ್ನಡ ಕಲಿಯಲು ಮಾತಾನಾಡಲು ಇಚ್ಛಿಸದವರು ಕರ್ನಾಟಕದಲ್ಲಿರಬೇಕ? ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿದ್ದರು ಕನ್ನಡದ ವಿರೋಧ ಏಕೆ? ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಈ ರಾಜ್ಯದಲ್ಲಿರಬೇಕಾದರೆ ಕನ್ನಡ ಭಾಷಾ ಜ್ಞಾನವಿರಬೇಕು. ಆದರೆ ಶೈಕ್ಷಣಿಕವಾಗಿ ಕನ್ನಡ ಕಡ್ಡಾಯವಾದರೆ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ, ಹರಿಪ್ರಿಯ ರಾಮಕೃಷ್ಣ ಎನ್ನುವವರು ಪಿಟಿಷನ್ ಶುರು ಮಾಡಿದ್ದಾರೆ. ಎರಡೂವರೆ ಸಾವಿರ ಸಹಿಗಳಾದರೆ ಅರ್ಜಿ ಮುಖ್ಯಮಂತ್ರಿ ಬಳಿ ಹೋಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕನ್ನಡಿಗ, ಕರ್ನಾಟಕ ಸಂಬಂಧ ವಿಷಯಗಳಲ್ಲಿ ಹೋರಾಡೋಣ; ಬೇರೆಲ್ಲಾ ವಿಷಯ ಉಪೇಕ್ಷಿಸೋಣ -ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್ ಕರೆ​

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!