ರೇಷ್ಮೆ ಇಲಾಖೆ ಅಧಿಕಾರಿಯಿಂದ ಲಂಚ ಸ್ವೀಕಾರ: ಎಸಿಬಿ ದಾಳಿ ವೇಳೆ ಸತ್ಯ ಬಯಲು
ಗ್ರಾಮ ಪಂಚಾಯತಿ ಸದಸ್ಯ ಜಯಣ್ಣ ಬಳಿ ಸಹಾಯಧನ ನೀಡಲು 10,000 ರೂಪಾಯಿ ಲಂಚ ಸ್ವೀಕಾರ ಮಾಡುವಾಗ ರೇಷ್ಮೆ ನಿರೀಕ್ಷಕ ಶಿವಕುಮಾರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಎಸಿಬಿ ಡಿವೈಎಸ್ಪಿ ಬಸವರಾಜ ಮತ್ತು ಪಿಐ ಪ್ರವೀಣ್ ನೇತೃತ್ವದ ದಾಳಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ.

ಚಿತ್ರದುರ್ಗ: ರೇಷ್ಮೆ ಇಲಾಖೆ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯ ಜಯಣ್ಣ ಬಳಿ ಸಹಾಯಧನ ನೀಡಲು 10,000 ರೂಪಾಯಿ ಲಂಚ ಸ್ವೀಕಾರ ಮಾಡುವಾಗ ರೇಷ್ಮೆ ನಿರೀಕ್ಷಕ ಶಿವಕುಮಾರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಎಸಿಬಿ ಡಿವೈಎಸ್ಪಿ ಬಸವರಾಜ ಮತ್ತು ಪಿಐ ಪ್ರವೀಣ್ ನೇತೃತ್ವದ ದಾಳಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ.
ಸರ್ಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿಕೊಡಿ ಎಂದು ಬರುವ ಸಾರ್ವಜನಿಕರಿಂದ ಲಂಚ ಸ್ವೀಕರಿಸಿರುವ ಅನೇಕ ಉದಾಹರಣೆಗಳಿವೆ. ನೇರವಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಕೆಲ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆದರೂ ಕೂಡ ಈ ರೀತಿ ಭ್ರಷ್ಟಾಚಾರ ಇನ್ನೂ ಕಡಿಮೆಯಾಗಿಲ್ಲ.
ಚಾಮರಾಜನಗರದಲ್ಲಿ ಲೇಬರ್ ಇನ್ಸ್ಪೆಕ್ಟರ್ ಹಾಗೂ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ: ಚಾಮರಾಜನಗರದಲ್ಲಿ ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್ ಇನ್ಸ್ಪೆಕ್ಟರ್ ಹಾಗೂ ಕಂಪ್ಯೂಟರ್ ಆಪರೇಟರ್ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸುಮಾರು 3 ಸಾವಿರ ರೂಪಾಯಿ ಲಂಚ ಸ್ವೀಕರಿಸ್ತಿದ್ದ ಲೇಬರ್ ಇನ್ಸ್ಪೆಕ್ಟರ್ ಗೀತಾ ಹಾಗೂ ಕಂಪ್ಯೂಟರ್ ಆಪರೇಟರ್ ಮಾಲತಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಾಲತಿ ಅವರು ಚೇತನ್ ಎಂಬುವವರ ಬಳಿ 3 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಎಇಇ ಎಸಿಬಿ ಬಲೆಗೆ: ಇತ್ತ, 5 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ AEE ಎಸಿಬಿ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಉಪವಿಭಾಗ ಕಚೇರಿಯಲ್ಲಿ ನಡೆದಿದೆ. ಮೆಸ್ಕಾಂ AEE ಬಿ.ಎಸ್.ಪ್ರಕಾಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೊಳವೆ ಬಾವಿಗೆ ಟಿಸಿ ಅಳವಡಿಕೆಗೆ 5,000 ರೂಪಾಯಿ ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ. ಹರೀಶ್ ಎಂಬುವವರ ಬಳಿ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಎಸ್.ಪಿ ಜಯಪ್ರಕಾಶ್ ನೇತೃತ್ವದ ತಂಡ ದಾಳಿ ನಡೆಸಿದೆ.
ಇದನ್ನೂ ಓದಿ:
Bribe 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ED ಅಧಿಕಾರಿ CBI ವಶಕ್ಕೆ
ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ