AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಅಮಾನತು

2 ಪ್ರತ್ಯೇಕ ಪ್ರಕರಣಗಳಲ್ಲಿ 6 ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ 6 ಸಿಬ್ಬಂದಿ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಅಮಾನತು
ಸಿಮ್ಸ್ ಆಸ್ಪತ್ರೆ
TV9 Web
| Edited By: |

Updated on:Jan 06, 2022 | 1:48 PM

Share

ಮೈಸೂರು: ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ ಆರೋಪಕ್ಕೆ ಸಂಬಂಧಿಸಿ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ್ರನ್ನು ಅಮಾನತುಗೊಳಿಸಲಾಗಿದೆ. ಆಸ್ಪತ್ರೆ ಡೀನ್ ಡಾ.ಸಂಜೀವ್ ಡಾ.ಮಹೇಶ್ವರ್ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಾರದ ಹಿಂದೆ ನರ್ಸಿಂಗ್ ವಿದ್ಯಾರ್ಥಿನಿಯೊಂದಿಗೆ ಡಾ.ಮಹೇಶ್ವರ್ ಅನುಚಿತ ವರ್ತನೆ ತೋರಿದ್ದರು. ಈ ಸಂಬಂಧ ನರ್ಸಿಂಗ್ ವಿದ್ಯಾರ್ಥಿನಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆಸ್ಪತ್ರೆ ಡೀನ್ ಡಾ.ಸಂಜೀವ್, ಡಾ.ಮಹೇಶ್ವರ್ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಆಂತರಿಕ ತನಿಖಾ ಸಮಿತಿ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

2 ಪ್ರತ್ಯೇಕ ಪ್ರಕರಣಗಳಲ್ಲಿ 6 ಪೊಲೀಸ್ ಸಿಬ್ಬಂದಿ ಅಮಾನತು ಇನ್ನು ಮತ್ತೊಂದೆಡೆ 2 ಪ್ರತ್ಯೇಕ ಪ್ರಕರಣಗಳಲ್ಲಿ 6 ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ 6 ಸಿಬ್ಬಂದಿ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಒಂದು ಕಡೆ ಪೋಕ್ಸೋ ಕೇಸ್‌ನಲ್ಲಿ ಲೋಪ ಎಸಗಿದ ಪ್ರಕರಣದಲ್ಲಿ ಪಿಎಸ್‌ಐ ಸಸ್ಪೆಂಡ್ ಮಾಡಲಾಗಿದೆ. ಮಹಿಳಾ ಠಾಣೆಯ ಪಿಎಸ್‌ಐ ರೋಸಮ್ಮ ಅಮಾನತುಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧವೇ ದೂರು ಬಂದಾಗ ಪಿಎಸ್‌ಐ ರೋಸಮ್ಮ ನಿರ್ಲಕ್ಷ್ಯ ವಹಿಸಿದ್ದರು.ಜುಲೈ 27 ರಂದು ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್ಐ​ ರೋಸಮ್ಮ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ್ದರು ಎಂಬ ಆರೋಪವಿದೆ. ಪಿಎಸ್ಐ​ ಕರ್ತವ್ಯ ಲೋಪದ ಕುರಿತು ಕೇಂದ್ರ ಉಪವಿಭಾಗ ಎಸಿಪಿ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಪೊಲೀಸ್ ‌ಕಮೀಷನರ್ ಅಮಾನತು ಆದೇಶ ಹೊರಡಿಸಿದ್ದಾರೆ.

ಇನ್ನು ಮತ್ತೊಂದು ಕಡೆ ಪೊಲೀಸ್ ಠಾಣೆಯಲ್ಲಿ ಮದ್ಯದ ಪಾರ್ಟಿ ಮಾಡಿದ್ದ ಹಿನ್ನೆಲೆ ಮಹಿಳಾ ಠಾಣೆಯ ಐವರು ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಠಾಣೆಯಲ್ಲಿ ಮದ್ಯಪಾನ ಮಾಡಿ ಅನುಚಿತ ವರ್ತನೆ ಹಿನ್ನೆಲೆ ಪುರುಷ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಇಬ್ಬರು ಎಎಸ್ಸೈ, ಇಬ್ಬರು ಹೆಡ್ ಕಾನ್ಸ್‌ಟೇಬಲ್, ಒಬ್ಬ ಕಾನ್ಸ್‌ಟೇಬಲ್ ಅಮಾನತುಗೊಳಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಮತ್ತು ಎಸಿಪಿ ಹಾಗೂ ಡಿಸಿಪಿ ವರದಿಯನ್ವಯ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಶಬರಿಮಲೆ ದೇವಾಲಯ ಪ್ರವೇಶಿಸಿ ವಿವಾದ ಸೃಷ್ಟಿಸಿದ್ದ ಬಿಂದು ಅಮ್ಮಿನಿ ಮೇಲೆ ಹಲ್ಲೆ; ಕೆಳಗೆ ಬೀಳುವವರೆಗೂ ಹೊಡೆದ ಎಂದ ಹೋರಾಟಗಾರ್ತಿ

Published On - 9:42 am, Thu, 6 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ