AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿ ಸವಾರರಿಗೆ ಟ್ರಾಫಿಕ್ ಮಂಡೆಬಿಸಿ, 1 ತಿಂಗಳು ಎರಡು ಫ್ಲೈ ಓವರ್ ಬಂದ್‌

ಬೆಂಗಳೂರು: ಫ್ಲೈ ಓವರ್‌. ಸಿಲಿಕಾನ್ ಸಿಟಿ ಜನರ ಸಂಚಾರ ನಾಡಿ. ಟ್ರಾಫಿಕ್‌ನಿಂದ ವಿಲವಿಲ ಓದ್ದಾಡುವ ಬೆಂಗಳೂರಿನ ಜನರಿಗೆ ಈ ಫ್ಲೈ ಓವರ್‌ ಸ್ವಲ್ಪ ಮಟ್ಟಿಗೆ ಮುಕ್ತಿ ನೀಡುತ್ತೆ. ನಿರ್ವಹಣೆ ಇಲ್ಲದೆ ಪ್ಲೈ-ಓವರ್‌ಗಳು ಹಳ್ಳ ಹಿಡಿದ್ರೂ, ಜನ ಬಿಬಿಎಂಪಿಗೆ ಬೈತ ಸಂಚಾರ ಮಾಡ್ತಾರೆ. ಆದ್ರೆ ಈಗ ಫ್ಲೈ ಓವರ್ ಮೇಲೆ ಸಂಚಾರ ಮಾಡುವ ಸವಾರರಿಗೆ ಖುಷಿಯ ಜೊತೆ ಶಾಂಕಿಗ್ ಸುದ್ದಿಯೊಂದಿದೆ. ಒಂದು ತಿಂಗಳ ಕಾಲ ಎರಡು ಫ್ಲೈ ಓವರ್ ಬಂದ್‌! ಸಿಲಿಕಾನ್‌ ಸಿಟಿಯ ಪ್ರಮುಖ ಸಂಚಾರ ದಟ್ಟಣೆ ಇರುವ […]

ಸಿಲಿಕಾನ್ ಸಿಟಿ ಸವಾರರಿಗೆ ಟ್ರಾಫಿಕ್ ಮಂಡೆಬಿಸಿ, 1  ತಿಂಗಳು ಎರಡು ಫ್ಲೈ ಓವರ್ ಬಂದ್‌
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 17, 2019 | 8:32 AM

Share

ಬೆಂಗಳೂರು: ಫ್ಲೈ ಓವರ್‌. ಸಿಲಿಕಾನ್ ಸಿಟಿ ಜನರ ಸಂಚಾರ ನಾಡಿ. ಟ್ರಾಫಿಕ್‌ನಿಂದ ವಿಲವಿಲ ಓದ್ದಾಡುವ ಬೆಂಗಳೂರಿನ ಜನರಿಗೆ ಈ ಫ್ಲೈ ಓವರ್‌ ಸ್ವಲ್ಪ ಮಟ್ಟಿಗೆ ಮುಕ್ತಿ ನೀಡುತ್ತೆ. ನಿರ್ವಹಣೆ ಇಲ್ಲದೆ ಪ್ಲೈ-ಓವರ್‌ಗಳು ಹಳ್ಳ ಹಿಡಿದ್ರೂ, ಜನ ಬಿಬಿಎಂಪಿಗೆ ಬೈತ ಸಂಚಾರ ಮಾಡ್ತಾರೆ. ಆದ್ರೆ ಈಗ ಫ್ಲೈ ಓವರ್ ಮೇಲೆ ಸಂಚಾರ ಮಾಡುವ ಸವಾರರಿಗೆ ಖುಷಿಯ ಜೊತೆ ಶಾಂಕಿಗ್ ಸುದ್ದಿಯೊಂದಿದೆ.

ಒಂದು ತಿಂಗಳ ಕಾಲ ಎರಡು ಫ್ಲೈ ಓವರ್ ಬಂದ್‌! ಸಿಲಿಕಾನ್‌ ಸಿಟಿಯ ಪ್ರಮುಖ ಸಂಚಾರ ದಟ್ಟಣೆ ಇರುವ ಮಾರ್ಗ್ ಅಂದ್ರೆ ಅದು ಸಿರ್ಸಿ ಪ್ಲೈ ಓವರ್‌. ಆದ್ರೆ ಈ ಪ್ಲೈ ಓವರ್‌ನಲ್ಲಿ ಒಂದು ತಿಂಗಳ ಕಾಲ ವಾಹನ ಸಂಚಾರ ಸ್ಥಗಿತಗೊಳ್ಳಲಿದೆ. 2.65 ಕಿ.ಮೀ. ಉದ್ದದ ಮೇಲ್ಸೇತುವೆಯಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ವೇಳೆ ಮೈಸೂರು ರಸ್ತೆಯ ಫೈ ಓವರ್ ಮಾರ್ಗವಾಗಿ ರಾಯನ್‌ ವೃತ್ತದ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಿಂದ ಪರ್ಯಾಯ ಮಾರ್ಗಗಳಲ್ಲಿ ವಾಹನದಟ್ಟಣೆ ಎಂದಿಗಿಂತ ಹೆಚ್ಚಿರಲಿದೆ.

ಪುರಭವನದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ಒಂದು ಮಾರ್ಗವನ್ನು ಈಗಾಗಲೇ ಐದು ಕೋಟಿ ರೂ. ವೆಚ್ಚದಲ್ಲಿ ಕಳೆದ ಮಾರ್ಚ್‌ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿತ್ತು. ಇದೀಗ ಮತ್ತೂಂದು ಭಾಗದ ರಸ್ತೆಗೆ ಡಾಂಬರೀಕರಣ ಕಾಮಗಾರಿ ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದ್ರಿಂದ ನಿನ್ನೆಯಿಂದ ಸಿರ್ಸಿ ಫೈಒವರ್ ಸಂಚಾರ ಬಂದ ಆಗಿದೆ. ಇದರ ಜೊತೆ ಸುಮನಹಳ್ಳಿ ಮೇಲ್ಸೇತುವೆಯ ದುರಸ್ತಿ ಕಾಮಗಾರಿಯೂ ಪ್ರಾರಂಭವಾಗಲಿದೆ. ಈ ಎರಡು ಫ್ಲೈ ಒವರ್‌ ಡಾಂಬರೀಕರಣ ಮತ್ತು ದುರಸ್ತಿ ಕಾಮಗಾರಿಯನ್ನ 30 ದಿನಗಳೊಳಗೆ ಪೂರ್ಣಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.

ಮೈಸೂರು ರಸ್ತೆ ಮೇಲ್ಸೇತುವೆ ಮಾರ್ಗವಾಗಿ ರಾಯನ್ ವೃತ್ತದ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಿದ್ದರೂ ಸಂಚಾರ ದಟ್ಟಣೆ ಹೆಚ್ಚು ಇರಲಿದೆ. ಮೇಲ್ಸೇತುವೆ ಮೇಲೆ ಚಲಿಸುವ ವಾಹನಗಳು ಚಾಮರಾಜಪೇಟೆ ಮಾರ್ಗವಾಗಿ, ಬಿಬಿ ಜಂಕ್ಷನ್ ಮೈಸೂರು ರಸ್ತೆ ಮಾರ್ಗವಾಗಿ ಕೆಂಗೇರಿ-ಮೈಸೂರು ರಸ್ತೆ ಕಡೆಗೆ ಸಂಚರಿಸಲು ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆ ಸುಮನಹಳ್ಳಿ ಮೇಲ್ಸೇತುವೆಯಲ್ಲೂ ದುರಸ್ತಿ ಕಾಮಗಾರಿ ನಡೆಸುತ್ತಿದ್ದು, ಮಾರ್ಗ ಬದಲಾವಣೆ ಮಾಡಿಲ್ಲ. ಆದ್ರೆ ಎರಡು ಫ್ಲೈಓವರ್‌ನ ದುರಸ್ತಿ ಕಾಮಗಾರಿ ಏಕಕಾಲದಲ್ಲಿ ಶುರುವಾಗಿದ್ರಿಂದ ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ಜೋರಾಗಿದೆ.

ಒಟ್ನಲ್ಲಿ ಟ್ರಾಫಿಕ್‌ ಜಾಮ್‌ನಿಂದ ಕಂಗೆಟ್ಟ ಸಿಲಿಕಾನ್ ಸಿಟಿಜನರಿಗೆ ಈಗ ಏಕಕಾಲಕ್ಕೆ ಫ್ಲೈ ಓವರ್ ದುರಸ್ತಿ ಕಾಮಗಾರಿ ಶುರುಮಾಡಿದ್ರಿಂದ ಫುಲ್ ಮಂಡೆಬಿಸಿಯಾಗಿದೆ. ಆದ್ರೆ ಏನ್ ಮಾಡೋದು ಚಳಿಯಲಿ ಟ್ರಾಫಿಕ್ ಜೊತೆಯಲ್ಲಿ ಅಂತ ಟ್ರಾಫಿಕ್‌ನಲ್ಲಿ 1ತಿಂಗಳು ಒದ್ದಾಡುವುದು ಅನಿವಾರ್ಯ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ