AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಸಾವನ್ನಪ್ಪಿದ್ದು, ಅನುಕಂಪದ ಆಧಾರದ ಮೇಲೆ ಈತನ ಅವಲಂಬಿತರಿಗೆ ಮಾತ್ರ ಸರ್ಕಾರಿ ನೌಕರಿ ನೀಡಲು ಸಾಧ್ಯವಿದೆ. ಬದಲಾಗಿ ಸಹೋದರಿಯನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಮೇಲ್ಮನವಿಯನ್ನು ವಜಾಗೊಳಿಸಿದೆ.

ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
Rakesh Nayak Manchi|

Updated on:Sep 14, 2023 | 10:02 AM

Share

ಬೆಂಗಳೂರು, ಸೆ.14: ಅನುಕಂಪದ ಆಧಾರದ ಮೇಲೆ ಮೃತ ನೌಕರನ ಸಹೋದರಿಯನ್ನು ಸರ್ಕಾರಿ ನೌಕರಿಗೆ ನೇಮಕ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಹೇಳಿದೆ. ಅಲ್ಲದೆ, ಈ ಕುರಿತು ಸಲ್ಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಮೃತಪಟ್ಟ ಹಿನ್ನೆಲೆ ಅನುಕಂಪದ ಆಧಾರದ ಮೇಲೆ ತನಗೆ ಉದ್ಯೋಗ ನೀಡುವಂತೆ ಸಹೋದರಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು, ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹೆಚ್ಚು ಅರ್ಹತೆ ಮತ್ತು ಸಂಪಾದಿಸುತ್ತಿರುವ ಪತ್ನಿಗೆ ಜೀವನಾಂಶ ನೀಡಲಾಗದು: ದೆಹಲಿ ಹೈಕೋರ್ಟ್

ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 2(1)(ಬಿ)ಯನ್ನು ಉಲ್ಲೇಖಿಸಿದ ವಿಭಾಗೀಯ ಪೀಠವು, ಮೃತ ಪುರುಷ ವಿವಾಹಿತ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದ ಪತ್ನಿ, ಮಗ ಮತ್ತು ಮಗಳು (ಅವಿವಾಹಿತ/ ವಿವಾಹಿತ/ ವಿಚ್ಛೇದಿತ/ ವಿಧವೆ) ಹಾಗೂ ಅವರ ಜೊತೆ ವಾಸಿಸುತ್ತಿದ್ದವರಿಗೆ ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವ ಅವಕಾಶ ಇದೆ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Thu, 14 September 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​