AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಸಾವನ್ನಪ್ಪಿದ್ದು, ಅನುಕಂಪದ ಆಧಾರದ ಮೇಲೆ ಈತನ ಅವಲಂಬಿತರಿಗೆ ಮಾತ್ರ ಸರ್ಕಾರಿ ನೌಕರಿ ನೀಡಲು ಸಾಧ್ಯವಿದೆ. ಬದಲಾಗಿ ಸಹೋದರಿಯನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಮೇಲ್ಮನವಿಯನ್ನು ವಜಾಗೊಳಿಸಿದೆ.

ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
Rakesh Nayak Manchi|

Updated on:Sep 14, 2023 | 10:02 AM

Share

ಬೆಂಗಳೂರು, ಸೆ.14: ಅನುಕಂಪದ ಆಧಾರದ ಮೇಲೆ ಮೃತ ನೌಕರನ ಸಹೋದರಿಯನ್ನು ಸರ್ಕಾರಿ ನೌಕರಿಗೆ ನೇಮಕ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಹೇಳಿದೆ. ಅಲ್ಲದೆ, ಈ ಕುರಿತು ಸಲ್ಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಮೃತಪಟ್ಟ ಹಿನ್ನೆಲೆ ಅನುಕಂಪದ ಆಧಾರದ ಮೇಲೆ ತನಗೆ ಉದ್ಯೋಗ ನೀಡುವಂತೆ ಸಹೋದರಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು, ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹೆಚ್ಚು ಅರ್ಹತೆ ಮತ್ತು ಸಂಪಾದಿಸುತ್ತಿರುವ ಪತ್ನಿಗೆ ಜೀವನಾಂಶ ನೀಡಲಾಗದು: ದೆಹಲಿ ಹೈಕೋರ್ಟ್

ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 2(1)(ಬಿ)ಯನ್ನು ಉಲ್ಲೇಖಿಸಿದ ವಿಭಾಗೀಯ ಪೀಠವು, ಮೃತ ಪುರುಷ ವಿವಾಹಿತ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದ ಪತ್ನಿ, ಮಗ ಮತ್ತು ಮಗಳು (ಅವಿವಾಹಿತ/ ವಿವಾಹಿತ/ ವಿಚ್ಛೇದಿತ/ ವಿಧವೆ) ಹಾಗೂ ಅವರ ಜೊತೆ ವಾಸಿಸುತ್ತಿದ್ದವರಿಗೆ ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವ ಅವಕಾಶ ಇದೆ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Thu, 14 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!