AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
|

Updated on:Mar 25, 2021 | 12:53 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ CD ಲೇಡಿ ಇದೀಗತಾನೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರ ಬಗ್ಗೆ ಅನುಮಾನ, ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸ್​ ಕಮಿಷನರ್​ ಅವರಿಗೆ ಈ ಹಿಂದೆ ವಿಡಿಯೋ ತಲುಪಿಸಿದ್ದೆ. ಆದರೆ ಅದನ್ನು ತಡವಾಗಿ ಬಿಡುಗಡೆ ಮಾಡಿ ನನಗೆ ಅನ್ಯಾಯ ಮಾಡಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ. ಯುವತಿಗೆ ವಿಚಾರಣೆಗೆ ಹಾಜರಾಗಲು 5 ಬಾರಿ ನೋಟಿಸ್ ಕೊಟ್ಟಿದ್ದೇವೆ. 5 ಬಾರಿ ನೋಟಿಸ್ ಕೊಟ್ಟಿದ್ದರೂ ವಿಚಾರಣೆಗೆ ಬಂದಿಲ್ಲ. ಯುವತಿ ಇದ್ದ ಕಡೆಯೇ ವಿಚಾರಣೆ ಮಾಡುವುದಾಗಿ ಹೇಳಿದ್ದೆವು. ಆದರೂ ಯುವತಿ ತಾನಿರುವ ಮಾಹಿತಿಯನ್ನು ನೀಡಿಲ್ಲ ಎಂದಿದ್ದಾರೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ.

ತಾಜಾ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಗಂಭೀರ ಚರ್ಚೆ CD ಯಲ್ಲಿರುವ ಯುವತಿ ನಮ್ಮ ಬಳಿ ಬಂದು ರಕ್ಷಣೆ ಕೇಳಿಲ್ಲ. ಆ ಯುವತಿ ಎಲ್ಲಿದ್ದಾರೆಂದು ಕೂಡ ನಮಗೆ ಮಾಹಿತಿ ಇಲ್ಲ. ಹೀಗಿರಬೇಕಾದರೆ ಯುವತಿಗೆ ರಕ್ಷಣೆ ಕೊಡೋದು ಹೇಗೆ? ಎಂದು ಎಸ್‌ಐಟಿ ಸಭೆಯಲ್ಲಿ ಯುವತಿ ವಿಡಿಯೋ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ. ಇಂದು ಬಿಡುಗಡೆ ಮಾಡಿರುವ 1 ನಿಮಿಷ 13 ಸೆಕೆಂಡ್ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳು ಗಂಭೀರವಾಗಿ ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ

Published On - 12:24 pm, Thu, 25 March 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್