AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soumendu Mukherjee: 3 ತಿಂಗಳ ಸುದೀರ್ಘ ರಜೆ ಮುಗಿಸಿ ಎಸ್​ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ವಾಪಾಸ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರದಲ್ಲಿ ಪ್ರಕರಣ ದಾಖಲಾದ ಆರಂಭದ ದಿನದಿಂದಲೂ ಸೌಮೇಂದು ಚಟರ್ಜಿ ಈ ಕೇಸಿನ ತನಿಖೆಯ ಹೊಣೆ ಹೊತ್ತಿದ್ದರು.

Soumendu Mukherjee: 3 ತಿಂಗಳ ಸುದೀರ್ಘ ರಜೆ ಮುಗಿಸಿ ಎಸ್​ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ವಾಪಾಸ್
ಐಪಿಎಲ್ ಅಧಿಕಾರಿ ಸೌಮೇಂದು ಮುಖರ್ಜಿ
TV9 Web
| Edited By: |

Updated on:Jul 30, 2021 | 11:57 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಮುಖ್ಯಸ್ಥ ಸೌಮೇಂದು ಚಟರ್ಜಿ 3 ತಿಂಗಳ ಸುದೀರ್ಘ ರಜೆ ಮುಗಿಸಿ ಕೆಲಸಕ್ಕೆ ವಾಪಾಸಾಗಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಮುಖರ್ಜಿ ಕೋವಿಡ್ ಬಳಿಕ ಬೆನ್ನು ನೋವಿನ ಕಾರಣ ಹೇಳಿ ರಜೆ ಪಡೆದಿದ್ದರು. ಬಳಿಕ 2 ಬಾರಿ ಅವರ ರಜೆಯನ್ನು ವಿಸ್ತರಿಸಲಾಗಿತ್ತು.

ಅನಾರೋಗ್ಯದ ಕಾರಣ ನೀಡಿ ಮೇ 1ರಿಂದ ರಜೆ ಪಡೆದಿದ್ದ ಎಸ್​ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ 90 ದಿನಗಳ ಸುದೀರ್ಘ ರಜೆ ಮುಗಿಸಿ ಕೆಲಸಕ್ಕೆ ಮರಳಿದ್ದಾರೆ. SIT ಮುಖ್ಯಸ್ಥರಿಲ್ಲದೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವುದಕ್ಕೆ ಈ ಹಿಂದೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ರಮೇಶ್ ಜಾರಕಿಹೊಳಿ ಅವರ ವಿವಾದಿತ ಸಿಡಿ ಕೇಸ್​ನ ತನಿಖೆ ಆರಂಭವಾಗುತ್ತಿದ್ದಂತೆ ರಜೆ ಮೇಲೆ ತೆರಳಿದ್ದ ಸೌಮೇಂದು ಮುಖರ್ಜಿ ಅವರ ನಡೆ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರದಲ್ಲಿ ಪ್ರಕರಣ ದಾಖಲಾದ ಆರಂಭದ ದಿನದಿಂದಲೂ ಸೌಮೇಂದು ಚಟರ್ಜಿ ಈ ಕೇಸಿನ ತನಿಖೆಯ ಹೊಣೆ ಹೊತ್ತಿದ್ದರು. ಬಳಿಕ ಈ ಸಿಡಿ ಪ್ರಕರಣವನ್ನು ಎಸ್​ಐಟಿಗೆ ವಹಿಸಿದಾಗ ಆ ತಂಡದ ನೇತೃತ್ವವನ್ನು ಕೂಡ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಚಟರ್ಜಿಗೆ ವಹಿಸಲಾಗಿತ್ತು. ಸೌಮೇಂದು ಚಟರ್ಜಿ ಅನಾರೋಗ್ಯದ ಕಾರಣದಿಂದ ರಜೆ ಪಡೆದ ಬಳಿಕ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ನೀಡಲಾಗಿತ್ತು.

ಇದನ್ನೂ ಓದಿ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ

ಜಾರಕಿಹೊಳಿ ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥರು ರಜೆಯಲ್ಲಿದ್ದಾರೆ ಆದರೆ ತನಿಖಾ ವರದಿ ಮಾಹಿತಿ ಸೋರಿಕೆಯಾಗಿದೆ -ಆರೋಪ

(SIT Head Soumendu Mukherjee who Investigating Ramesh Jarkiholi CD Case Returned after 90 Days of Vacation)

Published On - 11:55 am, Fri, 30 July 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ