AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ. SIT ಸಾಕ್ಷ್ಯಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ, 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Mar 29, 2021 | 3:54 PM

Share

ಬೆಂಗಳೂರು: ಎಸ್‌ಐಟಿ ತಂಡ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸತತ 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸದೆ, ವಕೀಲರ ಜತೆ ಚರ್ಚಿಸಿ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ರಮೇಶ್ ಜಾರಕಿಹೊಳಿ ಜಾರಿಕೊಂಡಿದ್ದಾರೆ. ವಿಚಾರಣೆ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು 4 ದಿನ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಯಲ್ಲಿ ವಿಡಿಯೋ ಮತ್ತು ಯುವತಿಯ ಬಗ್ಗೆ ಎಸ್‌ಐಟಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಅವರೇ ಎಂಬುದಕ್ಕೆ ಎಸ್​ಐಟಿ ತಂಡ ಸಾಕ್ಷ್ಯಗಳನ್ನು ಮುಂದಿಟ್ಟಿದೆ. ಜತೆಗೆ, ಯುವತಿ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ಸಹ SIT ಸಾಕ್ಷ್ಯ ತೆರೆದಿಟ್ಟಿದೆ. ಅವುಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಲು ಮುಂದಾದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿತ್ತು. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದರು. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!