AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ. SIT ಸಾಕ್ಷ್ಯಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ, 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Mar 29, 2021 | 3:54 PM

Share

ಬೆಂಗಳೂರು: ಎಸ್‌ಐಟಿ ತಂಡ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸತತ 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸದೆ, ವಕೀಲರ ಜತೆ ಚರ್ಚಿಸಿ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ರಮೇಶ್ ಜಾರಕಿಹೊಳಿ ಜಾರಿಕೊಂಡಿದ್ದಾರೆ. ವಿಚಾರಣೆ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು 4 ದಿನ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಯಲ್ಲಿ ವಿಡಿಯೋ ಮತ್ತು ಯುವತಿಯ ಬಗ್ಗೆ ಎಸ್‌ಐಟಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಅವರೇ ಎಂಬುದಕ್ಕೆ ಎಸ್​ಐಟಿ ತಂಡ ಸಾಕ್ಷ್ಯಗಳನ್ನು ಮುಂದಿಟ್ಟಿದೆ. ಜತೆಗೆ, ಯುವತಿ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ಸಹ SIT ಸಾಕ್ಷ್ಯ ತೆರೆದಿಟ್ಟಿದೆ. ಅವುಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಲು ಮುಂದಾದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿತ್ತು. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದರು. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ