AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ. SIT ಸಾಕ್ಷ್ಯಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ, 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ
ಸಾಂದರ್ಭಿಕ ಚಿತ್ರ
guruganesh bhat
| Updated By: ಸಾಧು ಶ್ರೀನಾಥ್​|

Updated on: Mar 29, 2021 | 3:54 PM

Share

ಬೆಂಗಳೂರು: ಎಸ್‌ಐಟಿ ತಂಡ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸತತ 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸದೆ, ವಕೀಲರ ಜತೆ ಚರ್ಚಿಸಿ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ರಮೇಶ್ ಜಾರಕಿಹೊಳಿ ಜಾರಿಕೊಂಡಿದ್ದಾರೆ. ವಿಚಾರಣೆ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು 4 ದಿನ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಯಲ್ಲಿ ವಿಡಿಯೋ ಮತ್ತು ಯುವತಿಯ ಬಗ್ಗೆ ಎಸ್‌ಐಟಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಅವರೇ ಎಂಬುದಕ್ಕೆ ಎಸ್​ಐಟಿ ತಂಡ ಸಾಕ್ಷ್ಯಗಳನ್ನು ಮುಂದಿಟ್ಟಿದೆ. ಜತೆಗೆ, ಯುವತಿ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ಸಹ SIT ಸಾಕ್ಷ್ಯ ತೆರೆದಿಟ್ಟಿದೆ. ಅವುಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಲು ಮುಂದಾದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿತ್ತು. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದರು. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್