AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ. SIT ಸಾಕ್ಷ್ಯಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ, 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ
ಸಾಂದರ್ಭಿಕ ಚಿತ್ರ
guruganesh bhat
| Edited By: ಸಾಧು ಶ್ರೀನಾಥ್​|

Updated on: Mar 29, 2021 | 3:54 PM

Share

ಬೆಂಗಳೂರು: ಎಸ್‌ಐಟಿ ತಂಡ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸತತ 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸದೆ, ವಕೀಲರ ಜತೆ ಚರ್ಚಿಸಿ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ರಮೇಶ್ ಜಾರಕಿಹೊಳಿ ಜಾರಿಕೊಂಡಿದ್ದಾರೆ. ವಿಚಾರಣೆ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು 4 ದಿನ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಯಲ್ಲಿ ವಿಡಿಯೋ ಮತ್ತು ಯುವತಿಯ ಬಗ್ಗೆ ಎಸ್‌ಐಟಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಅವರೇ ಎಂಬುದಕ್ಕೆ ಎಸ್​ಐಟಿ ತಂಡ ಸಾಕ್ಷ್ಯಗಳನ್ನು ಮುಂದಿಟ್ಟಿದೆ. ಜತೆಗೆ, ಯುವತಿ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ಸಹ SIT ಸಾಕ್ಷ್ಯ ತೆರೆದಿಟ್ಟಿದೆ. ಅವುಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಲು ಮುಂದಾದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿತ್ತು. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದರು. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ