AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು