AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್​ ಬಗ್ಗೆ ಗೊತ್ತಿಲ್ಲ ಎಂದು ಜಾರಿಕೊಂಡ ಜಾರಕಿಹೊಳಿಗೆ, ಕಾಲ್​ ಡಿಟೈಲ್ಸ್​ ತೋರಿಸಿ ಶಾಕ್​ ಕೊಟ್ಟ ಎಸ್​ಐಟಿ ಅಧಿಕಾರಿಗಳು

ಎಸ್​ಐಟಿ ಅಧಿಕಾರಿಗಳು ಮುಂದಿಟ್ಟ ದಾಖಲೆಗಳನ್ನು ಕಂಡು ಬೆಚ್ಚಿಬಿದ್ದ ರಮೇಶ್​ ಜಾರಕಿಹೊಳಿ, ಆಕೆ ಯಾರು ಎಂಬುಂದೇ ಗೊತ್ತಿಲ್ಲ. ಮೊಬೈಲ್ ಬಗ್ಗೆ ನನಗೆ ಏನೂ ಗೊತ್ತಿಲ್ಲ, ನಾನು ಅನಕ್ಷರಸ್ಥ. ಯುವತಿ ಬಗ್ಗೆ ಏನೇನೂ ಗೊತ್ತಿಲ್ಲ, ನಾನು ಆಕೆಯನ್ನು ಯಾವತ್ತೂ ಭೇಟಿಯಾಗಿಲ್ಲ ಎಂದು ಹೇಳುತ್ತಾ ಫ್ಲ್ಯಾಟ್​ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಆಗಿದೆ ಎಂದಿದ್ದಾರೆ.

ಕಾಲ್​ ಬಗ್ಗೆ ಗೊತ್ತಿಲ್ಲ ಎಂದು ಜಾರಿಕೊಂಡ ಜಾರಕಿಹೊಳಿಗೆ, ಕಾಲ್​ ಡಿಟೈಲ್ಸ್​ ತೋರಿಸಿ ಶಾಕ್​ ಕೊಟ್ಟ ಎಸ್​ಐಟಿ ಅಧಿಕಾರಿಗಳು
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
Skanda
|

Updated on:Mar 20, 2021 | 10:03 AM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ರಮೇಶ್​ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಂಶ ಹೊರಗೆಡವಲು ಪ್ರಯತ್ನಿಸಿದ್ದಾರೆ. ಎರಡು ಕ್ಯಾಮೆರಾಗಳನ್ನಿಟ್ಟು ಸತತ ನಾಲ್ಕು ಗಂಟೆಗಳ ಕಾಲ ರಮೇಶ್​ ಜಾರಕಿಹೊಳಿ ಅವರನ್ನು ವಿಚಾರಿಸಲಾಯಿತಾದರೂ ಅವರಿಂದ ಬಹುತೇಕ ಪ್ರಶ್ನೆಗಳಿಗೆ ‘ಗೊತ್ತಿಲ್ಲ’ ಎಂಬ ಉತ್ತರವೇ ಲಭ್ಯವಾಗಿದೆ. ಈ ವೇಳೆ ಯುವತಿ ಜೊತೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆ ಬಗ್ಗೆ ಎಸ್​ಐಟಿ ಅಧಿಕಾರಿಗಳು ಪ್ರಶ್ನೆ ಕೇಳಿದಾಗ ಅದಕ್ಕೂ ಯಥವಾತ್ತಾಗಿ ನನಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ, ಅದನ್ನು ಅಷ್ಟಕ್ಕೇ ಬಿಡದ ಅಧಿಕಾರಿಗಳು ಸುಮಾರು 20 ನಿಮಿಷ ಅವಧಿಯ ಕರೆಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ರಮೆಶ್​ ಜಾರಕಿಹೊಳಿ ಮುಂದಿಟ್ಟು ಶಾಕ್ ನೀಡಿದ್ದಾರೆ ಎನ್ನಲಾಗಿದೆ.

ಎಸ್​ಐಟಿ ಅಧಿಕಾರಿಗಳು ಮುಂದಿಟ್ಟ ದಾಖಲೆಗಳನ್ನು ಕಂಡು ಬೆಚ್ಚಿಬಿದ್ದ ರಮೇಶ್​ ಜಾರಕಿಹೊಳಿ, ಆಕೆ ಯಾರು ಎಂಬುದೇ ಗೊತ್ತಿಲ್ಲ. ಮೊಬೈಲ್ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಅದರಲ್ಲಿ ನಾನು ಅನಕ್ಷರಸ್ಥ. ಯುವತಿ ಬಗ್ಗೆ ಏನೇನೂ ಗೊತ್ತಿಲ್ಲ, ನಾನು ಆಕೆಯನ್ನು ಯಾವತ್ತೂ ಭೇಟಿಯಾಗಿಲ್ಲ ಎಂದು ಹೇಳುತ್ತಾ ಫ್ಲ್ಯಾಟ್​ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಆಗಿದೆ ಮತ್ತು ಇದರ ಹಿಂದೆ ಮಹಾನಾಯಕ ಇದ್ದಾನೆ ಎಂದು ಉತ್ತರ ಕೊಟ್ಟಿದ್ದಾರೆ.

ಇದೇ ವಿಷಯವನ್ನು ಇಟ್ಟುಕೊಂಡ ಎಸ್​ಐಟಿ ಮಹಾನಾಯಕ ಯಾರೆಂದು ಹೇಳಿ ಎಂದಾಗ ಮತ್ತೆ ತನ್ನ ಮಾಮೂಲಿ ವರಸೆ ತೆಗೆದ ರಮೇಶ್ ಜಾರಕಿಹೊಳಿ, ಆತ ಯಾರು ಎಂಬುದನ್ನು ನೀವೇ ತನಿಖೆ ಮಾಡಿ ಎಂದು ಅಧಿಕಾರಿಗಳಿಗೇ ತಿರುಗುಬಾಣ ಬಿಟ್ಟಿದ್ದಾರೆ. ಸಿಡಿ ನಕಲಿ ಎನ್ನುವುದಕ್ಕೆ ದಾಖಲೆ ಕೊಡಿ ಎಂದಾಗಲೂ ಆರೋಪದ ಬಗ್ಗೆ ನೀವೇ ತನಿಖೆ ಮಾಡಿ ಎಂದಿದ್ದಾರೆ. ಅಂತೆಯೇ ದೃಶ್ಯದಲ್ಲಿರುವ ಫ್ಲ್ಯಾಟ್​ ಕುರಿತು ವಿಚಾರಿಸಿದ ಅಧಿಕಾರಿಗಳು, ಅದು ನಿಮ್ಮ ಆಪ್ತರ ಫ್ಲ್ಯಾಟ್​ ಅಲ್ಲವೇ ಎಂದಾಗ ಅದು ಯಾರ ಮನೆ, ಏನು ಅನ್ನೊದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

ಸತತ 4 ಗಂಟೆಯ ವಿಚಾರಣೆಯಲ್ಲಿ ಒಟ್ಟು 56 ಪ್ರಶ್ನೆಗಳನ್ನು ಕೇಳಲಾಗಿದ್ದು, ಎಸ್​ಐಟಿ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್, ಕೇಂದ್ರ ವಿಭಾಗದ ಡಿಸಿ ಅನುಚೇತ್, ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ, ಎಸಿಪಿ ಧರ್ಮೇಂದ್ರ ಅವರಿಂದ ವಿಚಾರಣೆ ನಡೆಸಲಾಗಿದೆ. ವೈಯಕ್ತಿಕ ವಿಷಯಗಳಿಂದ ಆರಂಭವಾದ ವಿಚಾರಣೆಯಲ್ಲಿ ರಮೇಶ್ ಜಾರಕಿಹೊಳಿ ಜನ್ಮಸ್ಥಳ, ವಿದ್ಯಾಭ್ಯಾಸ, ಜೀವನದ ಪ್ರಮುಖ ವಿಚಾರಗಳಿಂದ ಹಿಡಿದು ಹಂತಹಂತವಾಗಿ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 9:51 am, Sat, 20 March 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?