AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್

ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಹಾಜರಾಗುಂತೆ SIT ಯಿಂದ ನೋಟಿಸ್ ನೀಡಲಾಗಿದೆ. ಪತ್ರಕರ್ತನ ಪತ್ನಿಗೆ ಬಸವನಗುಡಿ ಮಹಿಳಾ ಠಾಣೆಗೆ ಹಾಜರಾಗಲು ಸೂಚನೆ​ ಕೊಡಲಾಗಿದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ SIT ನೋಟಿಸ್
ಪ್ರಾತಿನಿಧಿಕ ಚಿತ್ರ
KUSHAL V
|

Updated on:Mar 15, 2021 | 9:15 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಮೂಲದ ಪತ್ರಕರ್ತನ ಪತ್ನಿಗೆ ನೋಟಿಸ್ ಜಾರಿಯಾಗಿದೆ. ವಿಚಾರಣೆಗೆ ಹಾಜರಾಗುಂತೆ SIT ಯಿಂದ ನೋಟಿಸ್ ನೀಡಲಾಗಿದೆ. ಪತ್ರಕರ್ತನ ಪತ್ನಿಗೆ ಬಸವನಗುಡಿ ಮಹಿಳಾ ಠಾಣೆಗೆ ಹಾಜರಾಗಲು ಸೂಚನೆ​ ಕೊಡಲಾಗಿದೆ.

ನಾಳೆ ಬೆಳಗ್ಗೆ 10.30ಕ್ಕೆ ಹಾಜರಾಗುವಂತೆ SIT ನೋಟಿಸ್ ನೀಡಿದೆ. ತುಮಕೂರು ಮೂಲದ ಆರೋಪಿಯ ಪತ್ನಿಗೆ SIT ನೋಟಿಸ್ ನೀಡಿದ್ದು ದಾಳಿ ವೇಳೇ ಮಹಿಳೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನೋಟಿಸ್​ ಜಾರಿಮಾಡಲಾಗಿದೆ. SIT ತನಿಖೆ ಆರಂಭವಾದ ದಿನದಿಂದ ನಾಪತ್ತೆಯಾಗಿರುವ ಸದ್ಯ ಅದೇ ಆರೋಪಿ, ಸಂತ್ರಸ್ತ ಯುವತಿ ಹಾಗೂ ಹ್ಯಾಕರ್​ಗಾಗಿ SIT ತಂಡ ಹುಡುಕಾಟ ನಡೆಸುತ್ತಿದೆ.

BNG SIT RAID 2

ಖಾಸಗಿ ಜಾಹೀರಾತು ಕಂಪನಿ ಮೇಲೆ SIT ತಂಡ ದಾಳಿ

ಖಾಸಗಿ ಜಾಹೀರಾತು ಕಂಪನಿ ಮೇಲೆ SIT ತಂಡ ದಾಳಿ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ ಖಾಸಗಿ ಜಾಹೀರಾತು ಕಂಪನಿ ಮೇಲೆ SIT ತಂಡ ದಾಳಿ ನಡೆಸಿದೆ. ಕುಮಾರಕೃಪಾ ರಸ್ತೆಯಲ್ಲಿರುವ ಜಾಹೀರಾತು ಕಂಪನಿ ಮೇಲೆ ತಂಡ ದಾಳಿ ನಡೆಸಿದೆ. CD ಮತ್ತು ಫೋಟೋ ಎಡಿಟ್ ಮಾಡಿರಬಹುದಾದ ಶಂಕೆ ಹಿನ್ನೆಲೆಯಲ್ಲಿ ತಂಡ ದಾಳಿ ನಡೆಸಿದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಎಸಿಪಿ ನಾಗರಾಜ್ ನೇತೃತ್ವದ SIT ತಂಡದಿಂದ ಶೋಧ ನಡೆದಿದೆ.

BNG SIT RAID 1

ದಾಳಿಯಲ್ಲಿ ವಶಪಡಿಸಿಕೊಂಡ ವಸ್ತುಗಳು

ಚಿಕ್ಕಮಗಳೂರು ಮೂಲದ ಆರೋಪಿ ಇದೇ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಎಡಿಟ್ ಮಾಡಲಾಗಿದೆ ಎನ್ನುತ್ತಿರುವ ಸಿ.ಡಿಗೆ ಧ್ವನಿ‌ ನೀಡಿರುವ ಆರೋಪ ಈತನ ಮೇಲಿದೆ. ಸದ್ಯ, ಅದೇ ಆರೋಪಿಯ ಧ್ವನಿ ಮಾದರಿಯನ್ನ FSL​ಗೆ ರವಾನಿಸಲಾಗಿದೆ.

ಕಚೇರಿಯಲ್ಲಿದ್ದ ಲ್ಯಾಪ್‌ಟಾಪ್​, ಸಿಡಿಗಳು, ಡಿವಿಡಿ, ಪೆನ್​ಡ್ರೈವ್ ವಶಕ್ಕೆ ಪಡೆಯಲಾಗಿದೆ. ಸಿಡಿ ವಾಯ್ಸ್ ಎಡಿಟ್ ಶಂಕೆ ಹಿನ್ನೆಲೆ‌ ದಾಳಿ ನಡೆಸಿದ್ದ SIT ಕಂಪನಿಯ ಮಾಲೀಕರಿಗೆ ನೋಟಿಸ್​​​​ ನೀಡಿದೆ. ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

ರಮೇಶ್ ಜಾರಕಿಹೊಳಿ ಸಿಡಿ: ರಾಜಕೀಯ ಹೋರಾಟಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ಡಿಕೆಶಿ ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಕುರಿತು ರಾಜಕೀಯ ಹೋರಾಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. ಈ ಕಾರಣಕ್ಕೆ ಇಂದು ಹಿರಿಯ ಕಾಂಗ್ರೆಸ್ ನಾಯಕರ ಸಭೆ ಕರೆದ ಡಿ.ಕೆ.ಶಿವಕುಮಾರ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

50 ಹಿರಿಯ ‘ಕೈ’ ನಾಯಕರೊಂದಿಗೆ ಡಿಕೆಶಿ ಸಭೆ ನಡೆಸಿದರು. ಈಗಾಗಲೇ ಶಾಸಕ ಸಂಗಮೇಶ್ ಪ್ರಕರಣ, ಜನಾಕ್ರೋಶ ಸಭೆ ಹಾಗೂ ಜನಧ್ವನಿ ಸಭೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಹೀಗಾಗಿ, ಸಿಡಿ ಪ್ರಕರಣವನ್ನೂ ಸರ್ಕಾರದ ವಿರುದ್ಧ ಬಳಸಿಕೊಳ್ಳಲು ಶಿವಕುಮಾರ್​ ಆಸಕ್ತಿ ತೋರಿದ್ದಾರೆ.

ಈ ಹಿನ್ನೆಲೆಯಲ್ಲಿ, ಇಂದು ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ‘ಕೈ’ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಸಿದ್ದರಾಮಯ್ಯ, ರಮೇಶ್ ಕುಮಾರ್, ರೆಹಮಾನ್ ಖಾನ್, ಕೆ.ಜೆ.ಜಾರ್ಜ್, ಎಸ್.ಆರ್.ಪಾಟೀಲ್, ಜಮೀರ್ ಅಹ್ಮದ್ ಖಾನ್, ರಾಮಲಿಂಗಾರೆಡ್ಡಿ, ಖಂಡ್ರೆ ಮತ್ತು ಅಜಯ್ ಸಿಂಗ್ ಸೇರಿದಂತೆ ಹಲವು ನಾಯಕರು ಭಾಗಿಯಾದರು.

ಇದನ್ನೂ ಓದಿ: ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ

Published On - 7:19 pm, Mon, 15 March 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು