Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು.

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ
ಆರೋಪಿ ಶ್ರೀಕಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:May 07, 2024 | 1:07 PM

ಬೆಂಗಳೂರು, ಮೇ 07: ಬಿಟ್ ಕಾಯಿನ್ ಹಗರಣ (Bitcoin Scam) ಪ್ರಕರಣದ ಆರೋಪಿ ಶ್ರೀಕಿ (Sriki) ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿದ್ದಾರೆ. ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು.

2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು.ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು.2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಇದಾದ ಬಳಿಕ ಸಿಸಿಬಿ ಪೊಲೀಸರ ವಿರುದ್ಧ ದಾಖಲೆ ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಟ್​ ಕಾಯಿನ್​ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಯಿತು.

ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದನು. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Tue, 7 May 24

RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ