AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ ಭೇಟಿ ನೀಡಿ ಆರೋಗ್ಯ ಸಂಬಂಧಿ ದಾಖಲೆ ಪರಿಶೀಲಿಸಿದ ಎಸ್​ಐಟಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕು ಆಸ್ಪತ್ರೆಗೆ ಎಸ್​ಐಟಿ ತನಿಖಾಧಿಕಾರಿಗಳ ತಂಡ ಭೇಟಿ ನೀಡಿದ್ದು, ವೈದ್ಯರಿಂದ ಮಾಹಿತಿ ಕಲೆಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಆರೋಗ್ಯದ ಬಗ್ಗೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರನ್ನು ವಿಚಾರಿಸಿ ದಾಖಲೆ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ ಭೇಟಿ ನೀಡಿ ಆರೋಗ್ಯ ಸಂಬಂಧಿ ದಾಖಲೆ ಪರಿಶೀಲಿಸಿದ ಎಸ್​ಐಟಿ
ಆಸ್ಪತ್ರೆಯಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ
Skanda
| Edited By: |

Updated on:Apr 06, 2021 | 3:01 PM

Share

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಅಧಿಕಾರಿಗಳು ನಿರಂತರ ತನಿಖೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​ ಇದೆ ಎಂಬ ಸಂಗತಿ ಹೊರಬಿದ್ದಿದ್ದು ಅವರನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿರುವುದಾಗಿ ವೈದ್ಯಾಧಿಕಾರಿಗಳು ತಿಳಿಸಿದ್ದರು. ಇದೀಗ ಈ ಬಗ್ಗೆ ಮಾಹಿತಿ ಪಡೆಯಲು ರಮೇಶ್ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೆ ಎಸ್​ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕು ಆಸ್ಪತ್ರೆಗೆ ಎಸ್​ಐಟಿ ತನಿಖಾಧಿಕಾರಿಗಳ ತಂಡ ಭೇಟಿ ನೀಡಿದ್ದು, ವೈದ್ಯರಿಂದ ಮಾಹಿತಿ ಕಲೆಹಾಕಿದೆ. ರಮೇಶ್ ಜಾರಕಿಹೊಳಿ ಆರೋಗ್ಯದ ಬಗ್ಗೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರನ್ನು ವಿಚಾರಿಸಿ ದಾಖಲೆ ಪಡೆದ ಅಧಿಕಾರಿಗಳು, ರಮೇಶ್ ಜಾರಕಿಹೊಳಿ ಯಾವಾಗ ಆಸ್ಪತ್ರೆಗೆ ದಾಖಲಾಗಿದ್ದರು? ಪಾಸಿಟಿವ್​ ಬಂದಿದ್ದು ಯಾವಾಗ? ಆರೋಗ್ಯ ಸ್ಥಿತಿ ಈಗ ಹೇಗಿದೆ? ಇನ್ನೂ ಎಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕು? ಎಂಬುದೆಲ್ಲವನ್ನೂ ವಿಚಾರಿಸಿದ್ದು, ಇನ್ನೂ ಹಲವು ಪ್ರಶ್ನೆಗಳನ್ನು ವೈದ್ಯರ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅಧಿಕಾರಿಗಳು ಮಾಜಿ ಸಚಿವರ ಆರೋಗ್ಯದ ಬಗ್ಗೆ ಸವಿವರವಾಗಿ ವಿಚಾರಿಸಿ ದಾಖಲೆ ಪಡೆದ ಬಳಿಕ ಹೊರನಡೆದಿರುವುದಾಗಿ ತಿಳಿದುಬಂದಿದೆ.

ನಿನ್ನೆಯ ವರದಿಯಲ್ಲಿ ಏನಿತ್ತು? ಅಶ್ಲೀಲ ಸಿಡಿ ಪ್ರಕರಣದಲ್ಲಿ ಎಸ್​ಐಟಿ ತನಿಖೆಯನ್ನು ಎದುರು ನೋಡುತ್ತಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ರಮೇಶ್​ ಜಾರಕಿಹೊಳಿ ಅನಾರೋಗ್ಯಪೀಡಿತರಾಗಿರುವುದಾಗಿ, ಕೊರೊನಾಕ್ಕೆ ತುತ್ತಾಗಿರುವುದಾಗಿ ಅನುಮಾನ, ಆತಂಕ, ಗೊಂದಲಗಳು ಹರಿದಾಡುತ್ತಿದ್ದವು. ಸದ್ಯ ಇದಕ್ಕೆಲ್ಲಾ ತೆರೆ ಬಿದ್ದಿದ್ದು ರಮೇಶ್​ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಸ್ಪಷ್ಟನೆ ನೀಡಿದ್ದಾರೆ. ಏಪ್ರಿಲ್​ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್​ ಟೆಸ್ಟ್​ ಮಾಡಿಸಿದ್ದ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ ಎಂದು ಆರೋಗ್ಯಾಧಿಕಾರಿಗಳು ಟಿವಿ9ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮುಚ್ಚಿದ ಲಕೋಟೆಯಲ್ಲಿ ಸಿಡಿ ಲೇಡಿ ತನಿಖಾ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಹೈಕೋರ್ಟ್ ಸೂಚನೆ 

ಆರೋಗ್ಯ ಸಮಸ್ಯೆ ನೆಪವೊಡ್ಡಿ ಎಸ್​ಐಟಿ ವಿಚಾರಣೆಯಿಂದ ದೂರ ಉಳೀತಾರಾ ರಮೇಶ್​ ಜಾರಕಿಹೊಳಿ?

Published On - 3:01 pm, Tue, 6 April 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ