AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ವಿಚಾರವಾಗಿ ಸ್ವಯಂಪ್ರೇರಿತ ದೂರು ದಾಖಲು ಸಾಧ್ಯತೆ; ತಪ್ಪಿತಸ್ಥರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ

ರಾಜಕಾರಣಿಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿರುವ ಅನುಮಾನ ದಟ್ಟವಾಗುತ್ತಿದ್ದು, ಇದೇ ಅಂಶದ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ದೂರು ದಾಖಲಾದರೆ ಈ ಕೃತ್ಯದಲ್ಲಿ ಪಾಲ್ಗೊಂಡವರಿಗೆ ಸಂಕಷ್ಟ ನಿಶ್ಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ.

ಸಿಡಿ ವಿಚಾರವಾಗಿ ಸ್ವಯಂಪ್ರೇರಿತ ದೂರು ದಾಖಲು ಸಾಧ್ಯತೆ; ತಪ್ಪಿತಸ್ಥರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ
ರಮೇಶ್​ ಜಾರಕಿಹೊಳಿ
Skanda
| Edited By: |

Updated on: Mar 13, 2021 | 1:04 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ತಂಡದ ಹಿರಿಯ ಅಧಿಕಾರಿಗಳು ನಿನ್ನೆ ನಡೆಸಿದ ಸಭೆಯಲ್ಲಿ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ಎಫ್​ಐಆರ್​ ಹಾಕುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಿದ್ದು, ಎಫ್ಐಆರ್​ ದಾಖಲಿಸದಿದ್ದರೆ ಸಮಗ್ರ ತನಿಖೆ ಸಾಧ್ಯವಿಲ್ಲ ಹೀಗಾಗಿ ತನಿಖೆಗೆ ಸಹಕಾರಿಯಾಗಲು ಈ ಮಾರ್ಗವನ್ನು ಅನುಸರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾಗಿ ತಿಳಿದುಬಂದಿದೆ. ರಾಜಕಾರಣಿಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿರುವ ಅನುಮಾನ ದಟ್ಟವಾಗುತ್ತಿದ್ದು ಇದೇ ಅಂಶದ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ದೂರು ದಾಖಲಾದರೆ ಈ ಕೃತ್ಯದಲ್ಲಿ ಪಾಲ್ಗೊಂಡವರಿಗೆ ಸಂಕಷ್ಟ ನಿಶ್ಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ.

ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿರುವವ ವಿಚಾರಣೆ ಮಾಡಲಾಗುತ್ತಿದೆ. ಸದ್ಯ ಈಗಾಗಲೇ ವಿಚಾರಣೆ ಎದುರಿಸಿದ್ದ ಓರ್ವನ ಸಂಪರ್ಕದಲ್ಲಿರುವ ಪುಣೆಯ ಪಬ್‌ ಮಾಲೀಕನನ್ನ ಎಸ್​ಐಟಿ ವಿಚಾರಣೆಗೆ ಒಳಪಡಿಸಿದೆ. ಬೀದರ್‌ನ ಭಾಲ್ಕಿಯಲ್ಲಿ ಈ ಸಂಬಂಧ ವಿಚಾರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ದೇವನಹಳ್ಳಿ ಬಳಿಯ ವಿಜಯಪುರದಲ್ಲಿ ಹ್ಯಾಕರ್​ ಸಹೋದರನನ್ನು ವಶಕ್ಕೆ ಪಡೆದ SIT ಅಧಿಕಾರಿಗಳು, ಆತನಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.

ಬ್ಯಾಂಕ್​ ವಹಿವಾಟು, ಮೊಬೈಲ್​ ಕರೆ ಸೇರಿದಂತೆ ಇಂಚಿಂಚೂ ವಿಚಾರಣೆ ಸಿಡಿ ಜಾಲದಲ್ಲಿ ಈಗಾಗಲೇ SIT ಐವರ ಮಾಹಿತಿ ಸಂಗ್ರಹಿಸಿ ತ್ವರಿತಗತಿಯಲ್ಲಿ ವಿಚಾರಣೆ ಮುಂದುವರೆಸಿದೆ. ಆ ವ್ಯಕ್ತಿಗಳು ಒಂದು ವರ್ಷದಿಂದ ನಡೆಸಿರುವ ಬ್ಯಾಂಕ್ ವಹಿವಾಟು, ಮೊಬೈಲ್ ಕರೆಗಳ ಬಗ್ಗೆಯೂ ನಿಗಾ ವಹಿಸಿರುವ ಎಸ್​ಐಟಿ, ಇಂಚಿಂಚೂ ಮಾಹಿತಿ ಜಾಲಾಡುತ್ತಿದೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಿಗಾಗಿ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಶೋಧ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲಿ ಬೆಂಗಳೂರು ನಗರ, ನಾಗರಬಾವಿ, ಶಂಕರಮಠ, ನವರಂಗ್, ಬೀದರ್​, ವಿಜಯಪುರ, ತುಮಕೂರಿನಲ್ಲಿ ಎಸ್‌ಐಟಿಯಿಂದ ಹುಡುಕಾಟ ನಡೆಯುತ್ತಿದ್ದು ಆದಷ್ಟು ಬೇಗ ಅವರನ್ನು ಪತ್ತೆ ಹಚ್ಚುವ ವಿಶ್ವಾಸದಲ್ಲಿ ಎಸ್​ಐಟಿ ಅಧಿಕಾರಿಗಳಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್​ಐಟಿ 

ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?