AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನರೇಶ್ ನಿವಾಸ ಹಾಗೂ ಲಗ್ಗೆರೆಯಲ್ಲಿರುವ ನರೇಶ್ ಆಪ್ತ ಅರುಣ್ ನಿವಾಸದ ಮೇಲೆ ಸರ್ಚ್ ವಾರಂಟ್‌ ಪಡೆದು ದಾಳಿ ನಡೆಸಿರುವ ಎಸ್​ಐಟಿ ಅಧಿಕಾರಿಗಳು ತನಿಖೆಗೆ ಬೇಕಾದ ಮಾಹಿತಿ ಕಲೆಹಾಕುತ್ತಿದ್ದಾರೆ.

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ
ಸಾಂದರ್ಭಿಕ ಚಿತ್ರ
Skanda
|

Updated on:Mar 17, 2021 | 6:21 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಪ್ರಮುಖ ಮಾಸ್ಟರ್​ ಮೈಂಡ್​ ಎಂಬ ಆರೋಪ ಹೊತ್ತಿರುವ ನರೇಶ್​ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಡಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನರೇಶ್ ಹಾಗೂ ಆಪ್ತ ಅರಣ್​ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನರೇಶ್ ನಿವಾಸ ಹಾಗೂ ಲಗ್ಗೆರೆಯಲ್ಲಿರುವ ನರೇಶ್ ಆಪ್ತ ಅರುಣ್ ನಿವಾಸದ ಮೇಲೆ ಸರ್ಚ್ ವಾರಂಟ್‌ ಪಡೆದು ದಾಳಿ ನಡೆಸಿರುವ ಎಸ್​ಐಟಿ ಅಧಿಕಾರಿಗಳು ತನಿಖೆಗೆ ಬೇಕಾದ ಮಾಹಿತಿ ಕಲೆಹಾಕಿದ್ದು, ತನಿಖೆ ಯಾವ ಹಾದಿಯಲ್ಲಿ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ನರೇಶ್​ ಕುಟುಂಬಸ್ಥರ ಮೇಲೆ ಕಣ್ಣಿಟ್ಟಿರುವ ಎಸ್​ಐಟಿ ಶಿರಾ, ಭುವನಹಳ್ಳಿ ಬಳಿ ಮಫ್ತಿಯಲ್ಲಿ ಶೋಧಕಾರ್ಯ ನಡೆಸಿದೆ. ವಿಶೇಷ ತನಿಖಾ ತಂಡದ 6 ಜನರಿಂದ ಹುಡುಕಾಟ ಮುಂದುವರೆದಿದ್ದು, 2 ದಿನದಿಂದ ಶಿರಾ ಸಮೀಪ ಬೀಡುಬಿಟ್ಟಿರುವ ಮಾಹಿತಿ ಲಭ್ಯವಾಗಿದೆ.

ಮಾಜಿ ಪತ್ರಕರ್ತ ನರೇಶ್ ಗೌಡ ಬಗ್ಗೆ ಹಾಗೂ ಸ್ನೇಹಿತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು, ನರೇಶ್ ಗೌಡನ ಚಲನವಲನ ಹಾಗೂ ಆತನ ಕುಟುಂಬಸ್ಥರ ಮೇಲೆ ನಿಗಾ ವಹಿಸಿದ್ದಾರೆ. ಸದ್ಯ ತನಿಖೆ ಬಗ್ಗೆ ವಿವಿಧ ಆಯಾಮದಲ್ಲಿ ಮಾಹಿತಿ ಕಲೆ ಹಾಕುತ್ತಿರುವ ಎಸ್​ಐಟಿ ಅಧಿಕಾರಿಗಳು ಸಿಡಿ ಹಿಂದಿನ ವಿವರಗಳನ್ನು ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ.ಇನ್ನು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಆರೋಪಿ ನರೇಶ್​​, ಪ್ರಕರಣ ಬಯಲಾಗುವ ಮುನ್ನ ಮನೆಗೆ ಬರುವುದು ನಿಲ್ಲಿಸಿದ್ದ ಎನ್ನುವುದು ತಿಳಿದುಬಂದಿದೆ. ಮಂಜುನಾಥನಗರದ ಮನೆ ಮುಂದೆ ನರೇಶ್ ಬೈಕ್ ನಿಲ್ಲಿಸಿ ಹೋಗಿದ್ದು, ಆತನ ಬೆಂಗಳೂರು ವಿಳಾಸ ಸಿಕ್ಕಿದ್ದ ಕಾರಣ ಎಸ್ಐಟಿ ಅಧಿಕಾರಿಗಳು, ಕೇವಲ ಮಾಲೀಕರನ್ನ ವಿಚಾರಿಸಿ ವಾಪಸಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

Published On - 5:11 pm, Wed, 17 March 21

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ