AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನರೇಶ್ ನಿವಾಸ ಹಾಗೂ ಲಗ್ಗೆರೆಯಲ್ಲಿರುವ ನರೇಶ್ ಆಪ್ತ ಅರುಣ್ ನಿವಾಸದ ಮೇಲೆ ಸರ್ಚ್ ವಾರಂಟ್‌ ಪಡೆದು ದಾಳಿ ನಡೆಸಿರುವ ಎಸ್​ಐಟಿ ಅಧಿಕಾರಿಗಳು ತನಿಖೆಗೆ ಬೇಕಾದ ಮಾಹಿತಿ ಕಲೆಹಾಕುತ್ತಿದ್ದಾರೆ.

ರಮೇಶ್​ ಜಾರಕಿಹೊಳಿ ‘ಸಿಡಿ’ ಮಾಸ್ಟರ್​ ಮೈಂಡ್​ ಮನೆ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ
ಸಾಂದರ್ಭಿಕ ಚಿತ್ರ
Follow us
Skanda
|

Updated on:Mar 17, 2021 | 6:21 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಪ್ರಮುಖ ಮಾಸ್ಟರ್​ ಮೈಂಡ್​ ಎಂಬ ಆರೋಪ ಹೊತ್ತಿರುವ ನರೇಶ್​ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಡಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನರೇಶ್ ಹಾಗೂ ಆಪ್ತ ಅರಣ್​ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನರೇಶ್ ನಿವಾಸ ಹಾಗೂ ಲಗ್ಗೆರೆಯಲ್ಲಿರುವ ನರೇಶ್ ಆಪ್ತ ಅರುಣ್ ನಿವಾಸದ ಮೇಲೆ ಸರ್ಚ್ ವಾರಂಟ್‌ ಪಡೆದು ದಾಳಿ ನಡೆಸಿರುವ ಎಸ್​ಐಟಿ ಅಧಿಕಾರಿಗಳು ತನಿಖೆಗೆ ಬೇಕಾದ ಮಾಹಿತಿ ಕಲೆಹಾಕಿದ್ದು, ತನಿಖೆ ಯಾವ ಹಾದಿಯಲ್ಲಿ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇನ್ನೊಂದೆಡೆ ನರೇಶ್​ ಕುಟುಂಬಸ್ಥರ ಮೇಲೆ ಕಣ್ಣಿಟ್ಟಿರುವ ಎಸ್​ಐಟಿ ಶಿರಾ, ಭುವನಹಳ್ಳಿ ಬಳಿ ಮಫ್ತಿಯಲ್ಲಿ ಶೋಧಕಾರ್ಯ ನಡೆಸಿದೆ. ವಿಶೇಷ ತನಿಖಾ ತಂಡದ 6 ಜನರಿಂದ ಹುಡುಕಾಟ ಮುಂದುವರೆದಿದ್ದು, 2 ದಿನದಿಂದ ಶಿರಾ ಸಮೀಪ ಬೀಡುಬಿಟ್ಟಿರುವ ಮಾಹಿತಿ ಲಭ್ಯವಾಗಿದೆ.

ಮಾಜಿ ಪತ್ರಕರ್ತ ನರೇಶ್ ಗೌಡ ಬಗ್ಗೆ ಹಾಗೂ ಸ್ನೇಹಿತರ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು, ನರೇಶ್ ಗೌಡನ ಚಲನವಲನ ಹಾಗೂ ಆತನ ಕುಟುಂಬಸ್ಥರ ಮೇಲೆ ನಿಗಾ ವಹಿಸಿದ್ದಾರೆ. ಸದ್ಯ ತನಿಖೆ ಬಗ್ಗೆ ವಿವಿಧ ಆಯಾಮದಲ್ಲಿ ಮಾಹಿತಿ ಕಲೆ ಹಾಕುತ್ತಿರುವ ಎಸ್​ಐಟಿ ಅಧಿಕಾರಿಗಳು ಸಿಡಿ ಹಿಂದಿನ ವಿವರಗಳನ್ನು ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ.ಇನ್ನು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಆರೋಪಿ ನರೇಶ್​​, ಪ್ರಕರಣ ಬಯಲಾಗುವ ಮುನ್ನ ಮನೆಗೆ ಬರುವುದು ನಿಲ್ಲಿಸಿದ್ದ ಎನ್ನುವುದು ತಿಳಿದುಬಂದಿದೆ. ಮಂಜುನಾಥನಗರದ ಮನೆ ಮುಂದೆ ನರೇಶ್ ಬೈಕ್ ನಿಲ್ಲಿಸಿ ಹೋಗಿದ್ದು, ಆತನ ಬೆಂಗಳೂರು ವಿಳಾಸ ಸಿಕ್ಕಿದ್ದ ಕಾರಣ ಎಸ್ಐಟಿ ಅಧಿಕಾರಿಗಳು, ಕೇವಲ ಮಾಲೀಕರನ್ನ ವಿಚಾರಿಸಿ ವಾಪಸಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ 

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

Published On - 5:11 pm, Wed, 17 March 21

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ