AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ನಡೆಸಿದ ಎಸ್​ಐಟಿ ಶುಕ್ರವಾರ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ದೋಷಾರೋಪಪಟ್ಟಿಯಲ್ಲಿ ಹಲವು ವಿಚಾರ ಬಹಿರಂಗಗೊಂಡಿವೆ.

ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ
ಮಾಜಿ ಸಂಸದ ಪ್ರಜ್ವಲ್​ ರೇವಣ್ಣ
Shivaprasad B
| Edited By: ವಿವೇಕ ಬಿರಾದಾರ|

Updated on:Aug 24, 2024 | 8:53 AM

Share

ಬೆಂಗಳೂರು, ಆಗಸ್ಟ್​ 23: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ವಿಶೇಷ ತನಿಖಾ ಸಂಸ್ಥೆ (SIT) ನ್ಯಾಯಲಯಕ್ಕೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ಸಂಸ್ಥೆ (SIT) ಶುಕ್ರವಾರ 2144 ಪುಟಗಳ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

2019 ರಿಂದ 2022ರವರೆಗೆ ಸಂತ್ರಸ್ತೆ ಮನೆ ಕೆಲಸಕ್ಕೆ ನಿಯೋಜನೆಯಾಗಿದ್ದರು. ಈ ವೇಳೆ ಹೆಚ್​ಡಿ ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ಸಮಯದಲ್ಲಿ ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖವಾಗಿದೆ.

ಪ್ರಜ್ವಲ್​ ರೇವಣ್ಣ ಹೊಳೆ ನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಪೋನ್​ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೆಂಗಳೂರಿನ ಬಸವನಗುಡಿ ಮನೆಯಲ್ಲಿ ಪ್ರಜ್ವಲ್​ ರೇವಣ್ಣ, ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್​ನಿಂದ ರೆಕಾರ್ಡ್ ಮಾಡಿಕೊಂಡಿದ್ದರು.

ಇದನ್ನೂ ಓದಿ: ಕಿಡ್ನ್ಯಾಪ್​ ಕೇಸ್​: ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್, ಖುದ್ದು ಹಾಜರಿಗೆ ಸೂಚನೆ

ಈ ವಿಚಾರವನ್ನು ಯಾರಿಗಾದರು ಹೇಳಿದರೆ ನಿನ್ನ (ಸಂತ್ರಸ್ಥೆ) ಪತಿಯನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಮತ್ತೆ ನಿನ್ನ ಮಗಳಿಗೂ ಇದೇ ಗತಿ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಈ ಎಲ್ಲ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವ ಸಲುವಾಗಿಯೇ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ತೆರಳಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಪ್ರಜ್ವಲ್ ಕಾರಣ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Sat, 24 August 24

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!