AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ

ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ನಡೆಸಲಾದ ವಿಚಾರಣೆ ಅಂತ್ಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರ ವಿಚಾರಣೆ ಅಂತ್ಯವಾಗಿದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ
SITಯಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ವಿಚಾರಣೆ
KUSHAL V
|

Updated on: Mar 16, 2021 | 6:59 PM

Share

ತುಮಕೂರು: ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ನಡೆಸಲಾದ ವಿಚಾರಣೆ ಅಂತ್ಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರ ವಿಚಾರಣೆ ಅಂತ್ಯವಾಗಿದೆ. ಇನ್​ಸ್ಪೆಕ್ಟರ್ ಅಂಜುಮಾಲಾ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸುಮಾರು 1 ಗಂಟೆ ಕಾಲ ನರೇಶ್ ಪತ್ನಿ ಮತ್ತು ತಾಯಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಸಿದರು.

ಅಂದ ಹಾಗೆ, ಇಂದು ವಿಚಾರಣೆಗೆ ಹಾಜರಾಗಲು ನರೇಶ್ ಪತ್ನಿಗೆ ನೋಟಿಸ್​ ನೀಡಲಾಗಿತ್ತು. ಆದರೆ, 1 ವರ್ಷದ ಮಗು ಮತ್ತು ನಮ್ಮ ಅತ್ತೆಗೆ ಹುಷಾರಿಲ್ಲ ಎಂದು ಮಾಜಿ ಪತ್ರಕರ್ತನ ಪತ್ನಿ ವಿಚಾರಣೆಗೆ ಬಂದಿರಲಿಲ್ಲ. ಈ ಕುರಿತು, ವಕೀಲರ ಮೂಲಕ ಎಸ್​ಐಟಿಗೆ ಮಾಹಿತಿ ನೀಡಲಾಗಿತ್ತು. ನರೇಶ್ ಪತ್ನಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಅಧಿಕಾರಿಗಳೇ ಅವರ ಮನೆಗೆ ಆಗಮಿಸಿ, ವಿಚಾರಣೆ ನಡೆಸಿ, ನರೇಶ್ ಪತ್ನಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್​ ಮಾಡಿದರು. 3 ಕಾರುಗಳಲ್ಲಿ ಬಂದಿದ್ದ ಎಸ್​ಐಟಿ ಅಧಿಕಾರಿಗಳ ತಂಡ ಮಹಿಳಾ ಸಿಬ್ಬಂದಿಯನ್ನೂ ಕರೆತಂದಿದ್ದರು.

ನಿವಾಸದಿಂದ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತ್ತ, ಬೆಂಗಳೂರಿನ ಸದಾಶಿವನಗರದ ಮನೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೆರಳಿದರು. ಇದಕ್ಕೂ ಮುನ್ನ ಅವರು ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿಶ್ರೀಗಳು ಮತ್ತು ಶಾಶಕ ರಾಜುಗೌಡರನ್ನು ಭೇಟಿಯಾದರು. ರಮೇಶ್​ ಮನೆಗೆ ಆಗಮಿಸಿ ಭೇಟಿಯಾಗಿದ್ದ ಶ್ರೀಗಳು, ಶಾಸಕರು ಮಾಜಿ ಸಚಿವರಿಗೆ ಧೈರ್ಯ ತುಂಬೋಕೆ ಮುಂದಾದರು.

ಈ ನಡುವೆ, ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಸಹ ಭೇಟಿಯಾದರು. ಸದಾಶಿವನಗರಕ್ಕೆ ಬಂದಿದ್ದ ಬೆಂಬಲಿಗರನ್ನ ಭೇಟಿಯಾದರು. ಬೆಳಗಾವಿ, ಗೋಕಾಕ್‌ನಿಂದ ಬಂದಿದ್ದ ಬೆಂಬಲಿಗರು ರಮೇಶ್​ರನ್ನು ಮಾತನಾಡಿಸಿದ ಬಳಿಕ ತೆರಳಿದರು.

ಇದನ್ನೂ ಓದಿ: ಪ್ರತಿಷ್ಠಿತ ಮೈಮುಲ್ ಚುನಾವಣೆ: ಮಾಜಿ ಸಿಎಂ HDKಗೆ ಮುಖಭಂಗ; GTD ಬಣಕ್ಕೆ ಭರ್ಜರಿ ಜಯ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್