AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ

ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ನಡೆಸಲಾದ ವಿಚಾರಣೆ ಅಂತ್ಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರ ವಿಚಾರಣೆ ಅಂತ್ಯವಾಗಿದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: SITಯಿಂದ ಮಾಜಿ ಪತ್ರಕರ್ತನ ಪತ್ನಿ, ತಾಯಿಯ ವಿಚಾರಣೆ
SITಯಿಂದ ಮಾಜಿ ಪತ್ರಕರ್ತ ನರೇಶ್ ಪತ್ನಿ ವಿಚಾರಣೆ
KUSHAL V
|

Updated on: Mar 16, 2021 | 6:59 PM

Share

ತುಮಕೂರು: ರಮೇಶ್ ಜಾರಕಿಹೊಳಿ CD ಪ್ರಕರಣಕ್ಕೆ ಸಂಬಂಧಿಸಿದಂತೆ ಭುವನಹಳ್ಳಿಯಲ್ಲಿ ಎಸ್​ಐಟಿ ಅಧಿಕಾರಿಗಳಿಂದ ನಡೆಸಲಾದ ವಿಚಾರಣೆ ಅಂತ್ಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿ ಮಾಜಿ ಪತ್ರಕರ್ತ ನರೇಶ್ ಪತ್ನಿ ಹಾಗೂ ಮನೆಯವರ ವಿಚಾರಣೆ ಅಂತ್ಯವಾಗಿದೆ. ಇನ್​ಸ್ಪೆಕ್ಟರ್ ಅಂಜುಮಾಲಾ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ಸುಮಾರು 1 ಗಂಟೆ ಕಾಲ ನರೇಶ್ ಪತ್ನಿ ಮತ್ತು ತಾಯಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಸಿದರು.

ಅಂದ ಹಾಗೆ, ಇಂದು ವಿಚಾರಣೆಗೆ ಹಾಜರಾಗಲು ನರೇಶ್ ಪತ್ನಿಗೆ ನೋಟಿಸ್​ ನೀಡಲಾಗಿತ್ತು. ಆದರೆ, 1 ವರ್ಷದ ಮಗು ಮತ್ತು ನಮ್ಮ ಅತ್ತೆಗೆ ಹುಷಾರಿಲ್ಲ ಎಂದು ಮಾಜಿ ಪತ್ರಕರ್ತನ ಪತ್ನಿ ವಿಚಾರಣೆಗೆ ಬಂದಿರಲಿಲ್ಲ. ಈ ಕುರಿತು, ವಕೀಲರ ಮೂಲಕ ಎಸ್​ಐಟಿಗೆ ಮಾಹಿತಿ ನೀಡಲಾಗಿತ್ತು. ನರೇಶ್ ಪತ್ನಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಖುದ್ದು ಅಧಿಕಾರಿಗಳೇ ಅವರ ಮನೆಗೆ ಆಗಮಿಸಿ, ವಿಚಾರಣೆ ನಡೆಸಿ, ನರೇಶ್ ಪತ್ನಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್​ ಮಾಡಿದರು. 3 ಕಾರುಗಳಲ್ಲಿ ಬಂದಿದ್ದ ಎಸ್​ಐಟಿ ಅಧಿಕಾರಿಗಳ ತಂಡ ಮಹಿಳಾ ಸಿಬ್ಬಂದಿಯನ್ನೂ ಕರೆತಂದಿದ್ದರು.

ನಿವಾಸದಿಂದ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇತ್ತ, ಬೆಂಗಳೂರಿನ ಸದಾಶಿವನಗರದ ಮನೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೆರಳಿದರು. ಇದಕ್ಕೂ ಮುನ್ನ ಅವರು ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿಶ್ರೀಗಳು ಮತ್ತು ಶಾಶಕ ರಾಜುಗೌಡರನ್ನು ಭೇಟಿಯಾದರು. ರಮೇಶ್​ ಮನೆಗೆ ಆಗಮಿಸಿ ಭೇಟಿಯಾಗಿದ್ದ ಶ್ರೀಗಳು, ಶಾಸಕರು ಮಾಜಿ ಸಚಿವರಿಗೆ ಧೈರ್ಯ ತುಂಬೋಕೆ ಮುಂದಾದರು.

ಈ ನಡುವೆ, ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಸಹ ಭೇಟಿಯಾದರು. ಸದಾಶಿವನಗರಕ್ಕೆ ಬಂದಿದ್ದ ಬೆಂಬಲಿಗರನ್ನ ಭೇಟಿಯಾದರು. ಬೆಳಗಾವಿ, ಗೋಕಾಕ್‌ನಿಂದ ಬಂದಿದ್ದ ಬೆಂಬಲಿಗರು ರಮೇಶ್​ರನ್ನು ಮಾತನಾಡಿಸಿದ ಬಳಿಕ ತೆರಳಿದರು.

ಇದನ್ನೂ ಓದಿ: ಪ್ರತಿಷ್ಠಿತ ಮೈಮುಲ್ ಚುನಾವಣೆ: ಮಾಜಿ ಸಿಎಂ HDKಗೆ ಮುಖಭಂಗ; GTD ಬಣಕ್ಕೆ ಭರ್ಜರಿ ಜಯ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!