AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ
ರಮೇಶ್​ ಜಾರಕಿಹೊಳಿ
ರಾಜೇಶ್ ದುಗ್ಗುಮನೆ
|

Updated on: Mar 24, 2021 | 11:30 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಾಕಷ್ಟು ಜನರನ್ನು ಕರೆದು ವಿಚಾರಣೆ ಕೂಡ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ರಮೇಶ್ ಜಾರಕಿಹೊಳಿ ಮೊಬೈಲ್​ಅನ್ನು ವಶಕ್ಕೆ ಪಡೆದಿದೆ. 

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ರಮೇಶ್ ಅವರ ಮೊಬೈಲ್​ಅನ್ನು ವಶಕ್ಕೆ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್​ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ.  ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!