AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ
ರಮೇಶ್​ ಜಾರಕಿಹೊಳಿ
ರಾಜೇಶ್ ದುಗ್ಗುಮನೆ
|

Updated on: Mar 24, 2021 | 11:30 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಾಕಷ್ಟು ಜನರನ್ನು ಕರೆದು ವಿಚಾರಣೆ ಕೂಡ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ರಮೇಶ್ ಜಾರಕಿಹೊಳಿ ಮೊಬೈಲ್​ಅನ್ನು ವಶಕ್ಕೆ ಪಡೆದಿದೆ. 

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ರಮೇಶ್ ಅವರ ಮೊಬೈಲ್​ಅನ್ನು ವಶಕ್ಕೆ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್​ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ.  ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

Follow Us
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ