AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರೀತಿ ಕುಮಾರಸ್ವಾಮಿಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT

ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಸಿದ್ದರಾಮಯ್ಯ ರೀತಿ ಕುಮಾರಸ್ವಾಮಿಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT
ಹೆಚ್ ಡಿ​ ಕುಮಾರಸ್ವಾಮಿ
Kiran HV
| Edited By: |

Updated on:Aug 21, 2024 | 11:02 AM

Share

ಬೆಂಗಳೂರು, ಆಗಸ್ಟ್​ 20: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ​ ಕುಮಾರಸ್ವಾಮಿ (HD Kumaraswamy) ಅವರಿಗೆ ಸಂಕಷ್ಟ ಎದುರಾಗಿದೆ. ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ (SSVM)​ ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಹೆಚ್​ಡಿ ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್​ಎಸ್​ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್​. ಸಂತೋಷ್​ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ

ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ನ್ಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ 2023 ನಂಬರ್ 21ರಂದು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29 ರಂದು ಎಸ್​ಐಟಿಗೆ ಪತ್ರ ಬರೆದರು. ಕೋರಿದ್ದ ಸ್ಪಷ್ಟನೆಗಳಿಗೆ ಉತ್ತರಗಳೊಂದಿಗೆ ಎಸ್​ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆಯಿತು. ಹಾಗೇ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:37 pm, Tue, 20 August 24

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್