AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರೀತಿ ಕುಮಾರಸ್ವಾಮಿಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT

ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಸಿದ್ದರಾಮಯ್ಯ ರೀತಿ ಕುಮಾರಸ್ವಾಮಿಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT
ಹೆಚ್ ಡಿ​ ಕುಮಾರಸ್ವಾಮಿ
Kiran HV
| Edited By: ವಿವೇಕ ಬಿರಾದಾರ|

Updated on:Aug 21, 2024 | 11:02 AM

Share

ಬೆಂಗಳೂರು, ಆಗಸ್ಟ್​ 20: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ​ ಕುಮಾರಸ್ವಾಮಿ (HD Kumaraswamy) ಅವರಿಗೆ ಸಂಕಷ್ಟ ಎದುರಾಗಿದೆ. ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​​ (SSVM)​ ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್​ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.

ಹೆಚ್​ಡಿ ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್​ಎಸ್​ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್​. ಸಂತೋಷ್​ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ

ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ನ್ಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್​ಐಟಿ 2023 ನಂಬರ್ 21ರಂದು ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29 ರಂದು ಎಸ್​ಐಟಿಗೆ ಪತ್ರ ಬರೆದರು. ಕೋರಿದ್ದ ಸ್ಪಷ್ಟನೆಗಳಿಗೆ ಉತ್ತರಗಳೊಂದಿಗೆ ಎಸ್​ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆಯಿತು. ಹಾಗೇ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:37 pm, Tue, 20 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು