AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !
ದಾಂಧಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Lakshmi Hegde
|

Updated on:May 03, 2021 | 7:44 PM

Share

ರಾಯಚೂರು: ಇಲ್ಲಿನ ಮಸ್ಕಿ ಉಪಚುನಾವಣೆಯಲ್ಲಿ ನಿನ್ನೆ ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್​ರ ಮಕ್ಕಳು, ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟೆ ಗಲಾಟೆ ಮಾಡುತ್ತಿದ್ದು, ಮಸ್ಕಿ ಎಂಬುದು ರಣರಂಗವಾದಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಂಡಲ್ಲಿ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ.

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ. ಈ ಸಂಬಂಧ ಮಹಿಳೆ ಮಸ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಲಾಟೆಗೆ ಸಂಬಂಧಪಟ್ಟಂತೆ, ಪ್ರತಾಪ್​ ಗೌಡ ಪಾಟೀಲ್​​ರ ಇಬ್ಬರು ಮಕ್ಕಳು ಸೇರಿ ಒಟ್ಟು 13 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮಸ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಇನ್ನು ಗೆದ್ದ ಕಾಂಗ್ರೆಸ್​ ಅಭ್ಯರ್ಥಿ ಬಸವನಗೌಡ ತುರುವಿಹಾಳ್ ಅವರು ಸಿದ್ದರಾಮಯ್ಯನವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಪ್ರತಾಪ್ ಗೌಡ ಪಾಟೀಲರ ಮಕ್ಕಳು ಮನೆಮನೆಗೆ ನುಗ್ಗಿ ದಾಂಧಲೆ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ನೀವೇ ಇಲ್ಲಿನ ಎಸ್​ಪಿ ಜತೆ ಮಾತನಾಡಿ ಎಂದೂ ಮನವಿ ಮಾಡಿದ್ದಾರೆ. ಅದಾದ ಬಳಿಕ ರಾಯಚೂರು ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಜನರ ತೀರ್ಪು. ಆದಾಗ್ಯೂ ಅವರೇಕೆ ಗೂಂಡಾಗಿರಿ ಮಾಡುತ್ತಿದ್ದಾರೆ? ಸುಮ್ಮನೆ ಮನೆಯಲ್ಲಿ ಇರಲು ಹೇಳಿ, ಕ್ರಮ ಕೈಗೊಳ್ಳಿ ಎಂದು ಎಸ್​ಪಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ

ಸಿಟಿ ಸ್ಕ್ಯಾನ್, ರಕ್ತ ತಪಾಸಣೆ, ಸ್ಟೀರಾಯ್ಡ್ ಯಾವಾಗ ಅಗತ್ಯ?-ಅಪಾಯದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ ಏಮ್ಸ್​ ನಿರ್ದೇಶಕ

Published On - 7:37 pm, Mon, 3 May 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ