AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !
ದಾಂಧಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Lakshmi Hegde
|

Updated on:May 03, 2021 | 7:44 PM

Share

ರಾಯಚೂರು: ಇಲ್ಲಿನ ಮಸ್ಕಿ ಉಪಚುನಾವಣೆಯಲ್ಲಿ ನಿನ್ನೆ ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್​ರ ಮಕ್ಕಳು, ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟೆ ಗಲಾಟೆ ಮಾಡುತ್ತಿದ್ದು, ಮಸ್ಕಿ ಎಂಬುದು ರಣರಂಗವಾದಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಂಡಲ್ಲಿ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ.

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ. ಈ ಸಂಬಂಧ ಮಹಿಳೆ ಮಸ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಲಾಟೆಗೆ ಸಂಬಂಧಪಟ್ಟಂತೆ, ಪ್ರತಾಪ್​ ಗೌಡ ಪಾಟೀಲ್​​ರ ಇಬ್ಬರು ಮಕ್ಕಳು ಸೇರಿ ಒಟ್ಟು 13 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮಸ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಇನ್ನು ಗೆದ್ದ ಕಾಂಗ್ರೆಸ್​ ಅಭ್ಯರ್ಥಿ ಬಸವನಗೌಡ ತುರುವಿಹಾಳ್ ಅವರು ಸಿದ್ದರಾಮಯ್ಯನವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಪ್ರತಾಪ್ ಗೌಡ ಪಾಟೀಲರ ಮಕ್ಕಳು ಮನೆಮನೆಗೆ ನುಗ್ಗಿ ದಾಂಧಲೆ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ನೀವೇ ಇಲ್ಲಿನ ಎಸ್​ಪಿ ಜತೆ ಮಾತನಾಡಿ ಎಂದೂ ಮನವಿ ಮಾಡಿದ್ದಾರೆ. ಅದಾದ ಬಳಿಕ ರಾಯಚೂರು ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಜನರ ತೀರ್ಪು. ಆದಾಗ್ಯೂ ಅವರೇಕೆ ಗೂಂಡಾಗಿರಿ ಮಾಡುತ್ತಿದ್ದಾರೆ? ಸುಮ್ಮನೆ ಮನೆಯಲ್ಲಿ ಇರಲು ಹೇಳಿ, ಕ್ರಮ ಕೈಗೊಳ್ಳಿ ಎಂದು ಎಸ್​ಪಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ

ಸಿಟಿ ಸ್ಕ್ಯಾನ್, ರಕ್ತ ತಪಾಸಣೆ, ಸ್ಟೀರಾಯ್ಡ್ ಯಾವಾಗ ಅಗತ್ಯ?-ಅಪಾಯದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ ಏಮ್ಸ್​ ನಿರ್ದೇಶಕ

Published On - 7:37 pm, Mon, 3 May 21

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ