AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !
ದಾಂಧಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Lakshmi Hegde
|

Updated on:May 03, 2021 | 7:44 PM

Share

ರಾಯಚೂರು: ಇಲ್ಲಿನ ಮಸ್ಕಿ ಉಪಚುನಾವಣೆಯಲ್ಲಿ ನಿನ್ನೆ ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್​ರ ಮಕ್ಕಳು, ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟೆ ಗಲಾಟೆ ಮಾಡುತ್ತಿದ್ದು, ಮಸ್ಕಿ ಎಂಬುದು ರಣರಂಗವಾದಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಂಡಲ್ಲಿ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ.

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ. ಈ ಸಂಬಂಧ ಮಹಿಳೆ ಮಸ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಲಾಟೆಗೆ ಸಂಬಂಧಪಟ್ಟಂತೆ, ಪ್ರತಾಪ್​ ಗೌಡ ಪಾಟೀಲ್​​ರ ಇಬ್ಬರು ಮಕ್ಕಳು ಸೇರಿ ಒಟ್ಟು 13 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮಸ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಇನ್ನು ಗೆದ್ದ ಕಾಂಗ್ರೆಸ್​ ಅಭ್ಯರ್ಥಿ ಬಸವನಗೌಡ ತುರುವಿಹಾಳ್ ಅವರು ಸಿದ್ದರಾಮಯ್ಯನವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಪ್ರತಾಪ್ ಗೌಡ ಪಾಟೀಲರ ಮಕ್ಕಳು ಮನೆಮನೆಗೆ ನುಗ್ಗಿ ದಾಂಧಲೆ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ನೀವೇ ಇಲ್ಲಿನ ಎಸ್​ಪಿ ಜತೆ ಮಾತನಾಡಿ ಎಂದೂ ಮನವಿ ಮಾಡಿದ್ದಾರೆ. ಅದಾದ ಬಳಿಕ ರಾಯಚೂರು ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಜನರ ತೀರ್ಪು. ಆದಾಗ್ಯೂ ಅವರೇಕೆ ಗೂಂಡಾಗಿರಿ ಮಾಡುತ್ತಿದ್ದಾರೆ? ಸುಮ್ಮನೆ ಮನೆಯಲ್ಲಿ ಇರಲು ಹೇಳಿ, ಕ್ರಮ ಕೈಗೊಳ್ಳಿ ಎಂದು ಎಸ್​ಪಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ

ಸಿಟಿ ಸ್ಕ್ಯಾನ್, ರಕ್ತ ತಪಾಸಣೆ, ಸ್ಟೀರಾಯ್ಡ್ ಯಾವಾಗ ಅಗತ್ಯ?-ಅಪಾಯದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ ಏಮ್ಸ್​ ನಿರ್ದೇಶಕ

Published On - 7:37 pm, Mon, 3 May 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ