AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ಗೆದ್ದಿದ್ದಕ್ಕೆ ರಣರಂಗವಾಯ್ತು ಮಸ್ಕಿ; ಪ್ರತಾಪ್​ ಗೌಡ ಪಾಟೀಲರ ಮಕ್ಕಳಿಂದ ಗಲಾಟೆ, ಮಹಿಳೆಯ ಮಾನಭಂಗಕ್ಕೂ ಯತ್ನ !
ದಾಂಧಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Lakshmi Hegde
|

Updated on:May 03, 2021 | 7:44 PM

Share

ರಾಯಚೂರು: ಇಲ್ಲಿನ ಮಸ್ಕಿ ಉಪಚುನಾವಣೆಯಲ್ಲಿ ನಿನ್ನೆ ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಾಜಿತ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್​ರ ಮಕ್ಕಳು, ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟೆ ಗಲಾಟೆ ಮಾಡುತ್ತಿದ್ದು, ಮಸ್ಕಿ ಎಂಬುದು ರಣರಂಗವಾದಂತಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕಂಡಲ್ಲಿ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ.

ಪ್ರತಾಪ್​ ಗೌಡ ಪಾಟೀಲರ ಮಕ್ಕಳಾದ ಪ್ರಸನ್ನ ಪಾಟೀಲ್, ಚೇತನ್​ ಪಾಟೀಲ್​ ಹಾಗೂ ಮತ್ತಿತರ ಬಿಜೆಪಿ ಕಾರ್ಯಕರ್ತರು ಸೇರಿ ಗಲಾಟೆ ನಡೆಸಿದ್ದು, ಕಾಂಗ್ರೆಸ್​​ನ್ನು ಬೆಂಬಲಿಸಿದ್ದ ಮಹಿಳೆಯೊಬ್ಬಳ ಮಾನಭಂಗಕ್ಕೂ ಪ್ರಯತ್ನಿಸಿದ್ದಾರೆ. ಈ ಸಂಬಂಧ ಮಹಿಳೆ ಮಸ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಲಾಟೆಗೆ ಸಂಬಂಧಪಟ್ಟಂತೆ, ಪ್ರತಾಪ್​ ಗೌಡ ಪಾಟೀಲ್​​ರ ಇಬ್ಬರು ಮಕ್ಕಳು ಸೇರಿ ಒಟ್ಟು 13 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮಸ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಇನ್ನು ಗೆದ್ದ ಕಾಂಗ್ರೆಸ್​ ಅಭ್ಯರ್ಥಿ ಬಸವನಗೌಡ ತುರುವಿಹಾಳ್ ಅವರು ಸಿದ್ದರಾಮಯ್ಯನವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ಪ್ರತಾಪ್ ಗೌಡ ಪಾಟೀಲರ ಮಕ್ಕಳು ಮನೆಮನೆಗೆ ನುಗ್ಗಿ ದಾಂಧಲೆ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ನೀವೇ ಇಲ್ಲಿನ ಎಸ್​ಪಿ ಜತೆ ಮಾತನಾಡಿ ಎಂದೂ ಮನವಿ ಮಾಡಿದ್ದಾರೆ. ಅದಾದ ಬಳಿಕ ರಾಯಚೂರು ಎಸ್​ಪಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಜನರ ತೀರ್ಪು. ಆದಾಗ್ಯೂ ಅವರೇಕೆ ಗೂಂಡಾಗಿರಿ ಮಾಡುತ್ತಿದ್ದಾರೆ? ಸುಮ್ಮನೆ ಮನೆಯಲ್ಲಿ ಇರಲು ಹೇಳಿ, ಕ್ರಮ ಕೈಗೊಳ್ಳಿ ಎಂದು ಎಸ್​ಪಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನ್​ ಜನ್ಯ ಅಣ್ಣ ಕೊರೊನಾದಿಂದ ನಿಧನ; ನೋವು ತೋಡಿಕೊಂಡ ಸಂಗೀತ ನಿರ್ದೇಶಕ

ಸಿಟಿ ಸ್ಕ್ಯಾನ್, ರಕ್ತ ತಪಾಸಣೆ, ಸ್ಟೀರಾಯ್ಡ್ ಯಾವಾಗ ಅಗತ್ಯ?-ಅಪಾಯದ ಮುನ್ನೆಚ್ಚರಿಕೆ ಕೊಟ್ಟಿದ್ದಾರೆ ಏಮ್ಸ್​ ನಿರ್ದೇಶಕ

Published On - 7:37 pm, Mon, 3 May 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್