AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!

ಉಜಿರೆ ಬಾಲಕ ಅನುಭವ್ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ ಕಂಡಿದೆ. ಬಾಲಕ ಅನುಭವ್ ಕಿಡ್ನ್ಯಾಪ್ ಮಾಡಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿಯಲ್ಲಿದ್ದ ನಾಲ್ವರು ಕಿಡ್ನ್ಯಾಪರ್ಸ್ ಅರೆಸ್ಟ್ ಆಗಿದ್ದಾರೆ.

ಉಜಿರೆ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ: ಬೆಳಗಿನ ಜಾವ ಕೋಲಾರದಲ್ಲಿ ಬಾಲಕ, ಅಪಹರಣಕಾರರ ಪತ್ತೆ!
ಬಾಲಕ ಅನುಭವ್
ಆಯೇಷಾ ಬಾನು
|

Updated on:Dec 19, 2020 | 8:37 AM

Share

ಮಂಗಳೂರು: ಉಜಿರೆ ಬಾಲಕ ಅನುಭವ್ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ ಕಂಡಿದೆ. ಬಾಲಕ ಅನುಭವ್ ಕಿಡ್ನ್ಯಾಪ್ ಮಾಡಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿಯಲ್ಲಿ ಕಿಡ್ನ್ಯಾಪರ್ಸ್ ಸೇರಿ 6 ಜನ ಅರೆಸ್ಟ್ ಆಗಿದ್ದಾರೆ.

ಕಿಡ್ನ್ಯಾಪರ್ಸ್ ಕೊರ್ನಹೊಸಳ್ಳಿಯ ಮಂಜುನಾಥ್ ಎಂಬುವರ ಮನೆಯೊಂದರಲ್ಲಿ ಅನುಭವ್​ನನ್ನು ಬಚ್ಚಿಟ್ಟಿದ್ದರು. ಸದ್ಯ ಕೋಲಾರ ಎಸ್‌ಪಿ ಕಾರ್ತಿಕ್ ರೆಡ್ಡಿ ನೆರವಿನಿಂದ ಮಂಗಳೂರಿನ ವಿಶೇಷ ಪೊಲೀಸ್ ತಂಡದ ಕಾರ್ಯಚರಣೆಯಿಂದ ಆರೋಪಿಗಳನ್ನು ಬಂಧಿಸಿ ಕಿಡ್ನ್ಯಾಪ್ ಆಗಿದ್ದ ಉಜಿರೆಯ ಬಾಲಕ ಅನುಭವ್ ರಕ್ಷಣೆ ಮಾಡಲಾಗಿದೆ. ಬಿ.ಹನುಮಂತ(21), ಗಂಗಾಧರ್(25) ಖಾಸಗಿ ಕಂಪನಿಯ ಉದ್ಯೋಗಿ ಹೆಚ್.ಪಿ.ರಂಜಿತ್(22) ಮೆಕ್ಯಾನಿಕ್ ಕಮಲ್(23), ಟೈಲರ್ ಮಂಜುನಾಥ್(24) ಪೇಂಟರ್ ಮಹೇಶ್(26) ಸೇರಿ ಒಟ್ಟು 6 ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಪ್ರಕರಣದ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಬಾಲಕನನ್ನು ಅಪಹರಿಸಿ, 17 ಕೋಟಿ ರೂಪಾಯಿಗೆ ಬಾಲಕನ ತಂದೆ ಬಿಜೋಯ್​ಗೆ ಕರೆಮಾಡಿ ಬೇಡಿಕೆ ಇಡಲಾಗಿತ್ತು. ಪ್ರಕರಣ ಸಂಬಂಧ ಕೇಸ್ ದಾಖಲಾಗಿ ಪೊಲೀಸರು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ ಬಾಲಕ ಅನುಭವ್ ಪೋಷಕರಿಗೆ ಕಿಡ್ನ್ಯಾಪರ್ಸ್ ಮೆಸೇಜ್ ಮಾಡಿ ಪೊಲೀಸರಿಗೆ ದೂರು ನೀಡದಂತೆ ಎಚ್ಚರಿಕೆ ನೀಡಿದ್ದರು. ದೂರು ನೀಡಿದರೆ ಅನುಭವಿಸುತ್ತೀರಿ ಎಂದು ಮೆಸೇಜ್ ಹಾಕಿದ್ದರು. ಬಳಿಕ 10 ಕೋಟಿ ಮೌಲ್ಯದ ಬಿಟ್ ಕಾಯಿನ್‌ಗೆ ಒತ್ತಡ ಹಾಕಿದ್ದರು. ನಂತರ ಪೊಲೀಸರು ಬಾಲಕನ ಪತ್ತೆಗೆ 5 ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ಮೊದಲು ಮೂವರನ್ನು ಬಂಧಿಸಿ ಅವರ ವಿಚಾರಣೆ ನಡೆಸಿ ಬಳಿಕ ಕೊರ್ನಹೊಸಳ್ಳಿಯಲ್ಲಿ ನಾಲ್ವರು ಕಿಡ್ನ್ಯಾಪರ್ಸ್​ ಅರೆಸ್ಟ್ ಮಾಡಲಾಗಿದೆ. ಈ ರೀತಿ ಒಟ್ಟು 6 ಆರೋಪಿಗಳು ಕೋಲಾರ ಮಾಸ್ತಿ ಠಾಣೆಯಲ್ಲಿದ್ದಾರೆ.

ಉಜಿರೆ ಆಟೋ ಚಾಲಕ ನೀಡಿದ ಅದೊಂದು ಮಾಹಿತಿ: ಒಂದು ವರ್ಷದಿಂದಲೇ ಈ ಕಿಡ್ನ್ಯಾಪ್ ಬಗ್ಗೆ ಪ್ಲಾನ್ ಮಾಡಲಾಗಿದೆ. ಒಂದು ವರ್ಷದ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದ ಕಿಡ್ನ್ಯಾಪರ್ಸ್ ಅಲ್ಲಿ ಆಟೋದಲ್ಲಿ ಪ್ರಯಾಣಿಸಿ ಆಟೋ ಡ್ರೈವರ್ ಪರಿಚಯ ಮಾಡಿಕೊಂಡು ಆತನ ಬಳಿ ಉಜಿರೆ ಮತ್ತು ಈ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಿದ್ದರಂತೆ. ಕಿಡ್ನ್ಯಾಪ್ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಪೊಲೀಸರಿಗೆ ಆಟೋ ಚಾಲಕ ಮಾಹಿತಿ ನೀಡಿದ್ದಾನೆ. ಬಳಿಕ ಆತ ನೀಡಿದ ಸುಳಿವಿನ ಮೇರೆಗೆ ಪೊಲೀಸರು ಐದು ತಂಡ ರಚನೆ ಮಾಡಿ ಕಿಡ್ನ್ಯಾಪರ್ಸ್ ಪತ್ತೆ ಹಚ್ಚಲಾಗಿದೆ.

ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ: ಕೋಮಲ್ ಹಾಗೂ ಮಹೇಶ್ ಸ್ನೇಹಿತರು ಸೇರಿ ಅನುಭವ್ ಕಿಡ್ನ್ಯಾಪ್ ಮಾಡಿದ್ದರು. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಟ್ಯಾಂಕರ್ ಡ್ರೈವರ್ ಆಗಿದ್ದ ಮಹೇಶ್​ಗೆ ಕೋಮಲ್ ‌ಪರಿಚಯ. ಕಳೆದ‌ ರಾತ್ರಿಯಷ್ಟೇ‌ ಕೋಲಾರದ ಕೂರ್ನಹೊಸಳ್ಳಿ ಗ್ರಾಮಕ್ಕೆ ಮಗುವಿನೊಂದಿಗೆ ಕಿಡ್ಯಾಪರ್ಸ್ ಬಂದಿದ್ದರು. ಈ ವೇಳೆ ಕಿಡ್ನ್ಯಾಪರ್ಸ್ ಗ್ರಾಮದ ಮಂಜುನಾಥ್ ಎಂಬುವರ‌ ಮೊಬೈಲ್ ಬಳಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಟ್ರ್ಯಾಕ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಾಲೂರು ಕೋರ್ಟ್​ಗೆ ಅನುಭವ್ ಹಾಜರ್: ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಿಪಿಐ ಸಂದೇಶ್, ಪಿ.ಎಸ್.ಐ ನೇತೃತ್ವದ ತಂಡದಿಂದ ಈ ಪ್ರಕರಣ ಸುಖಾಂತ್ಯ ಕಂಡಿದೆ. ಡಿ.19ಇಂದು ಮೆಡಿಕಲ್ ಚಕಪ್ ಮಾಡಿ ಬಳಿಕ ಅನುಭವ್​ನನ್ನು ಮಾಲೂರು ಕೋರ್ಟ್​ಗೆ ಹಾಜರುಪಡಿಸಲಾಗುತ್ತೆ. ಅದಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಕರೆದುಕೊಂಡು ಬಂದು ಪೋಷಕರಿಗೆ ಮಗುವನ್ನು ಹಸ್ತಾಂತರಿಸಲಾಗುತ್ತೆ.

ಉಜಿರೆಯಲ್ಲಿ 8 ವರ್ಷದ ಬಾಲಕನ ಕಿಡ್ನಾಪ್ ಪ್ರಕರಣ: ಮೂವರು ಶಂಕಿತರು ಪೊಲೀಸ್​ ವಶಕ್ಕೆ‌

Published On - 7:03 am, Sat, 19 December 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?