AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಗ್ರಾಮದ 16 ಮಂದಿಗೆ ಸೋಂಕು, ಮನವೊಲಿಸಿ ಚಿಕಿತ್ಸೆಗೆ ಕಳಿಸಿದ ಶಿರಾ ಶಾಸಕ

ಶಿರಾ ತಾಲೂಕಿನ ಗುಡ್ಡದಹಟ್ಟಿ ಗ್ರಾಮದಲ್ಲಿ 16 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ರೆ ನಾವ್ಯಾರು ಚಿಕಿತ್ಸೆ ಪಡೆಯಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದು ಸ್ಥಳಕ್ಕೆ ಶಾಸಕ ಭೇಟಿ ನೀಡಿ ಸೋಂಕಿತರ ಮನವೊಲಿಸಿದ್ದಾರೆ.

ಒಂದೇ ಗ್ರಾಮದ 16 ಮಂದಿಗೆ ಸೋಂಕು, ಮನವೊಲಿಸಿ ಚಿಕಿತ್ಸೆಗೆ ಕಳಿಸಿದ ಶಿರಾ ಶಾಸಕ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 30, 2021 | 12:36 PM

Share

ತುಮಕೂರು: ಒಂದೇ ಗ್ರಾಮದಲ್ಲಿ ಬರೋಬ್ಬರಿ 16 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಇಡೀ ಗ್ರಾಮ ಆತಂಕದ ಸುಳಿಯಲ್ಲಿ ಸಿಲುಕಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗುಡ್ಡದಹಟ್ಟಿ ಗ್ರಾಮದಲ್ಲಿ 16 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ರೆ ನಾವ್ಯಾರು ಚಿಕಿತ್ಸೆ ಪಡೆಯಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದು ಸ್ಥಳಕ್ಕೆ ಶಾಸಕ ಭೇಟಿ ನೀಡಿ ಸೋಂಕಿತರ ಮನವೊಲಿಸಿದ್ದಾರೆ.

ಒಂದೇ ಗ್ರಾಮದ 16 ಮಂದಿಗೆ ಸೋಂಕು ತಗುಲಿದ್ದು ಇವರೆಲ್ಲ ಚಿಕಿತ್ಸೆ ಪಡೆಯುಲು ನಿರಾಕರಿಸಿದ್ದರು. ಈ ವೇಳೆ ಇವರ ನಿರ್ಧಾರದಿಂದ ಇಡೀ ಗ್ರಾಮ ಒಂದು ಕ್ಷಣ ಆತಂಕಕ್ಕೆ ಒಳಗಾಗಿತ್ತು. ಇಡೀ ಗ್ರಾಮಕ್ಕೆ ಸೋಂಕು ತಗುಲಬಹುದು ದಯವಿಟ್ಟು ಚಿಕಿತ್ಸೆ ಪಡೆಯಿರಿ ಎಂದು ಗ್ರಾಮಸ್ಥರು ಅಂಗಾಚಿದ್ರೂ ಸೋಂಕಿತರು ಮಾತ್ರ ತಮ್ಮ ನಿರ್ಧಾರ ಬದಲಾಯಿಸಿರಲಿಲ್ಲ. ಬಳಿಕ ಶಿರಾ ಶಾಸಕ ಡಾ.ರಾಜೇಶ್ ಗೌಡರಿಗೆ ಈ ಬಗ್ಗೆ ಮಾಹಿತಿ ನೀಡಲಾಯಿತು.

ಮಾಹಿತಿ ತಿಳಿದ ತಕ್ಷಣ ಆಂಬ್ಯುಲೆನ್ಸ್ ಸಮೇತ ಸ್ವತಃ ವೈದ್ಯರಾಗಿರೋ ಶಾಸಕ ಡಾ.ರಾಜೇಶ್ ಗೌಡ ಗ್ರಾಮಕ್ಕೆ ಭೇಟಿ ನೀಡಿ ಸೋಂಕಿತರ ಮನವೊಲಿಸಲು ಪ್ರಯತ್ನಿಸಿದ್ದಾರೆ. ನಿಮ್ಮಿಂದ ಇಡೀ ಹಳ್ಳಿಗೆ ಸೋಂಕು ತಗುಲಲಿದೆ. ಚಿಕಿತ್ಸೆ ಪಡೆಯಿರಿ ನಿಮ್ಮ ಜೊತೆ ನಾವಿದ್ದೇವೆ, ನಿಮಗೇನೂ ಆಗಲ್ಲ ಎಂದು ಮನವಿ ಮಾಡಿದ್ದಾರೆ. ಬಳಿಕ ಶಾಸಕರ ಮನವೊಲಿಕೆಯಿಂದ ಆಸ್ಪತ್ರೆಗೆ ಹೋಗಲು ಸೋಂಕಿತರು ಒಪ್ಪಿಕೊಂಡಿದ್ದು ಶಿರಾದ ಕೊವಿಡ್ ಸೆಂಟರ್ನಲ್ಲಿ ದಾಖಲಿಸಲಾಗಿದೆ. ಬಳಿಕ ಗ್ರಾಮದಲ್ಲೆಡೆ ಓಡಾಡಿ ಶಾಸಕರು ಅರಿವು ಮೂಡಿಸಿದ್ದಾರೆ.

ಇನ್ನು ರಾಯಚೂರು ನಗರಸಭೆಯ 6 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಗರಸಭೆ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.

ಇದನ್ನೂ ಓದಿ: ಜಿಮೇಲ್ ಅಕೌಂಟ್​ನ ಪಾಸ್​ವರ್ಡ್ ರೀಸೆಟ್ ಮಾಡೋದು ಹೇಗೆಂದು ಗೂಗಲ್ ಸಿಇಒ ಸುಂದರ್​ ಪಿಚೈಗೆ ಟ್ವೀಟ್

Published On - 12:34 pm, Fri, 30 April 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು