AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಗ್ರಾಮದ 16 ಮಂದಿಗೆ ಸೋಂಕು, ಮನವೊಲಿಸಿ ಚಿಕಿತ್ಸೆಗೆ ಕಳಿಸಿದ ಶಿರಾ ಶಾಸಕ

ಶಿರಾ ತಾಲೂಕಿನ ಗುಡ್ಡದಹಟ್ಟಿ ಗ್ರಾಮದಲ್ಲಿ 16 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ರೆ ನಾವ್ಯಾರು ಚಿಕಿತ್ಸೆ ಪಡೆಯಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದು ಸ್ಥಳಕ್ಕೆ ಶಾಸಕ ಭೇಟಿ ನೀಡಿ ಸೋಂಕಿತರ ಮನವೊಲಿಸಿದ್ದಾರೆ.

ಒಂದೇ ಗ್ರಾಮದ 16 ಮಂದಿಗೆ ಸೋಂಕು, ಮನವೊಲಿಸಿ ಚಿಕಿತ್ಸೆಗೆ ಕಳಿಸಿದ ಶಿರಾ ಶಾಸಕ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Apr 30, 2021 | 12:36 PM

Share

ತುಮಕೂರು: ಒಂದೇ ಗ್ರಾಮದಲ್ಲಿ ಬರೋಬ್ಬರಿ 16 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಇಡೀ ಗ್ರಾಮ ಆತಂಕದ ಸುಳಿಯಲ್ಲಿ ಸಿಲುಕಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗುಡ್ಡದಹಟ್ಟಿ ಗ್ರಾಮದಲ್ಲಿ 16 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ರೆ ನಾವ್ಯಾರು ಚಿಕಿತ್ಸೆ ಪಡೆಯಲ್ಲ ಎಂದು ಸೋಂಕಿತರು ಪಟ್ಟು ಹಿಡಿದಿದ್ದು ಸ್ಥಳಕ್ಕೆ ಶಾಸಕ ಭೇಟಿ ನೀಡಿ ಸೋಂಕಿತರ ಮನವೊಲಿಸಿದ್ದಾರೆ.

ಒಂದೇ ಗ್ರಾಮದ 16 ಮಂದಿಗೆ ಸೋಂಕು ತಗುಲಿದ್ದು ಇವರೆಲ್ಲ ಚಿಕಿತ್ಸೆ ಪಡೆಯುಲು ನಿರಾಕರಿಸಿದ್ದರು. ಈ ವೇಳೆ ಇವರ ನಿರ್ಧಾರದಿಂದ ಇಡೀ ಗ್ರಾಮ ಒಂದು ಕ್ಷಣ ಆತಂಕಕ್ಕೆ ಒಳಗಾಗಿತ್ತು. ಇಡೀ ಗ್ರಾಮಕ್ಕೆ ಸೋಂಕು ತಗುಲಬಹುದು ದಯವಿಟ್ಟು ಚಿಕಿತ್ಸೆ ಪಡೆಯಿರಿ ಎಂದು ಗ್ರಾಮಸ್ಥರು ಅಂಗಾಚಿದ್ರೂ ಸೋಂಕಿತರು ಮಾತ್ರ ತಮ್ಮ ನಿರ್ಧಾರ ಬದಲಾಯಿಸಿರಲಿಲ್ಲ. ಬಳಿಕ ಶಿರಾ ಶಾಸಕ ಡಾ.ರಾಜೇಶ್ ಗೌಡರಿಗೆ ಈ ಬಗ್ಗೆ ಮಾಹಿತಿ ನೀಡಲಾಯಿತು.

ಮಾಹಿತಿ ತಿಳಿದ ತಕ್ಷಣ ಆಂಬ್ಯುಲೆನ್ಸ್ ಸಮೇತ ಸ್ವತಃ ವೈದ್ಯರಾಗಿರೋ ಶಾಸಕ ಡಾ.ರಾಜೇಶ್ ಗೌಡ ಗ್ರಾಮಕ್ಕೆ ಭೇಟಿ ನೀಡಿ ಸೋಂಕಿತರ ಮನವೊಲಿಸಲು ಪ್ರಯತ್ನಿಸಿದ್ದಾರೆ. ನಿಮ್ಮಿಂದ ಇಡೀ ಹಳ್ಳಿಗೆ ಸೋಂಕು ತಗುಲಲಿದೆ. ಚಿಕಿತ್ಸೆ ಪಡೆಯಿರಿ ನಿಮ್ಮ ಜೊತೆ ನಾವಿದ್ದೇವೆ, ನಿಮಗೇನೂ ಆಗಲ್ಲ ಎಂದು ಮನವಿ ಮಾಡಿದ್ದಾರೆ. ಬಳಿಕ ಶಾಸಕರ ಮನವೊಲಿಕೆಯಿಂದ ಆಸ್ಪತ್ರೆಗೆ ಹೋಗಲು ಸೋಂಕಿತರು ಒಪ್ಪಿಕೊಂಡಿದ್ದು ಶಿರಾದ ಕೊವಿಡ್ ಸೆಂಟರ್ನಲ್ಲಿ ದಾಖಲಿಸಲಾಗಿದೆ. ಬಳಿಕ ಗ್ರಾಮದಲ್ಲೆಡೆ ಓಡಾಡಿ ಶಾಸಕರು ಅರಿವು ಮೂಡಿಸಿದ್ದಾರೆ.

ಇನ್ನು ರಾಯಚೂರು ನಗರಸಭೆಯ 6 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ನಗರಸಭೆ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.

ಇದನ್ನೂ ಓದಿ: ಜಿಮೇಲ್ ಅಕೌಂಟ್​ನ ಪಾಸ್​ವರ್ಡ್ ರೀಸೆಟ್ ಮಾಡೋದು ಹೇಗೆಂದು ಗೂಗಲ್ ಸಿಇಒ ಸುಂದರ್​ ಪಿಚೈಗೆ ಟ್ವೀಟ್

Published On - 12:34 pm, Fri, 30 April 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ