AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ದಿನ ಎಣ್ಣೆ ಪಾರ್ಟಿ ಮಾಡಿ ಅಪ್ಪ ಬೈತಾರೆ ಅಂತ ಕಿಡ್ನಾಪ್ ಕಥೆ ಕಟ್ಟಿದ ಬಾಲಕ

ಡಿ.31 ರಂದು ಮನೆಯಲ್ಲಿ‌ ಯಾರು ಇರದಿದ್ದಾಗ ನ್ಯೂ ಇಯರ್ ಅಂತ ಫುಲ್ ಎಣ್ಣೆ ಪಾರ್ಟಿ ಮಾಡಿ ಟೈಟ್​ ಆಗಿದ್ದ. ಇದೇ ವೇಳೆಗೆ ಕೊಚ್ಚಿಯಿಂದ ಅಪ್ಪ ಸ್ಯಾಮುಯೆಲ್ ನಿನಾನ್ ಕರೆ ಬರುತ್ತೆ. ಅಪ್ಪನ ಕಾಲ್ ನೋಡಿ ಎಲ್ಲಿ ತಾನು ಕುಡಿದಿರೋದು ಗೊತ್ತಾದ್ರೆ ಬೈತಾರೋ ಎಂಬ ಭಯಕ್ಕೆ ಮದ್ಯದ ಅಮಲಿನಲ್ಲೇ ತಂದೆಯ ಮುಂದೆ ಕಿಡ್ನಾಪ್ ಕಥೆ ಕಟ್ಟಿದ್ದ.

ನ್ಯೂ ಇಯರ್ ದಿನ ಎಣ್ಣೆ ಪಾರ್ಟಿ ಮಾಡಿ ಅಪ್ಪ ಬೈತಾರೆ ಅಂತ ಕಿಡ್ನಾಪ್ ಕಥೆ ಕಟ್ಟಿದ ಬಾಲಕ
ಕಿಡ್ನಾಪ್ ಕಥೆ ಕಟ್ಟಿದ ಬಾಲಕ
ಆಯೇಷಾ ಬಾನು
|

Updated on: Jan 08, 2021 | 7:58 AM

Share

ಬೆಂಗಳೂರು: ನ್ಯೂ ಇಯರ್ ದಿನ ಫುಲ್ ಎಣ್ಣೆ ಪಾರ್ಟಿ ಮಾಡಿ ಅಪ್ಪನಿಗೆ ಗೊತ್ತಾದ್ರೆ ಬೈತಾರೆ ಎಂದು ಬಾಲಕ ಕಿಡ್ನಾಪ್ ಕಥೆ ಕಟ್ಟಿರುವ ಘಟನೆ ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

16 ವರ್ಷದ ಈ ಬಾಲಕ ಹುಟ್ಟಿನಿಂದಲೇ ಶ್ರೀಮಂತ. ಹೀಗಾಗಿ ಆತನಿಗೆ ಹೇಳಿದನ್ನೆಲ್ಲ ಕೊಡಿಸಿ ಪ್ರೀತಿಯಿಂದ ಸಾಕಿರ್ತಾರೆ. ಈತ, ಮದುವೆ ಸಮಾರಂಭಕ್ಕಾಗಿ ಕೊಚ್ಚಿಯಿಂದ ಬೆಂಗಳೂರಿನ ತಾತನ ಮನೆಗೆ ಬಂದಿರ್ತಾನೆ. ಡಿ.31 ರಂದು ಮನೆಯಲ್ಲಿ‌ ಯಾರು ಇರದಿದ್ದಾಗ ನ್ಯೂ ಇಯರ್ ಅಂತ ಫುಲ್ ಎಣ್ಣೆ ಪಾರ್ಟಿ ಮಾಡಿ ಟೈಟ್​ ಆಗಿದ್ದ. ಇದೇ ವೇಳೆಗೆ ಕೊಚ್ಚಿಯಿಂದ ಅಪ್ಪ ಸ್ಯಾಮುಯೆಲ್ ನಿನಾನ್ ಕರೆ ಬರುತ್ತೆ. ಅಪ್ಪನ ಕಾಲ್ ನೋಡಿ ಎಲ್ಲಿ ತಾನು ಕುಡಿದಿರೋದು ಗೊತ್ತಾದ್ರೆ ಬೈತಾರೋ ಎಂಬ ಭಯಕ್ಕೆ ಮದ್ಯದ ಅಮಲಿನಲ್ಲೇ ತಂದೆಯ ಮುಂದೆ ಕಿಡ್ನಾಪ್ ಕಥೆ ಕಟ್ಟಿದ್ದ.

ಹಣಕ್ಕಾಗಿ ಗೃಹಬಂಧನದಲ್ಲಿರಿಸಿ ಕಿರುಕುಳ ಕೊಟ್ಟಿದ್ದಾರೆ ಎಂದು ಬಡಬಡಿಸಿದ್ದ. ಅನ್ಸಾರಿ ಎಂಬ ಪರಿಚಿತನ ಮೇಲೆ ಆರೋಪ ಹೊರಿಸಿದ್ದ. ಒತ್ತಾಯ ಪೂರ್ವಕವಾಗಿ ಜ್ಯೂಸ್ ನಲ್ಲಿ‌ ಕೆಮಿಕಲ್ ಸೇರಿಸಿ ಕುಡಿಸಲಾಗಿದೆ ಎಂದು ಆರೋಪಿಸಿದ್ದ. ಇಷ್ಟೆಲ್ಲಾ ಆಗಿದೆಯಾ ಎಂದು ಕೊಚ್ಚಿಯಲ್ಲಿದ್ದ ಬಾಲಕನ ತಂದೆ ಗಾಬರಿ ಆಗಿದ್ದಾರೆ. ಬಳಿಕ ಬೆಂಗಳೂರಿನಲ್ಲಿರುವ ತನ್ನ ಪರಿಚಯಸ್ಥರಿಗೆ, ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ.

ಬಳಿಕ ಅಪಾರ್ಟ್ಮೆಂಟ್ ಸೆಕ್ಯುರಿಟಿ ಸಹಾಯದಿಂದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ತಂದೆ ಸ್ಯಾಮುಯೆಲ್ ನಿನಾನ್ ಜೀವನ್ ಭಿಮಾ ನಗರ ಠಾಣೆಗೆ ದೂರು ನೀಡಿದ್ರು. ಕೊನೆಗೆ ವೈದ್ಯಕೀಯ ತಪಾಸಣೆ ವೇಳೆ ಬಾಲಕನ ಕಳ್ಳಾಟ ಬಯಲಾಗಿದೆ. ಅಪ್ಪ ಬೈತಾರೆ ಅಂತ ಇಷ್ಟೆಲ್ಲಾ ಡ್ರಾಮಾ ಮಾಡಿರುವುದಾಗಿ ಪೊಲೀಸರ ಮುಂದೆ ಬಾಲಕ ತಪ್ಪೊಪ್ಪಿಕೊಂಡಿದ್ದಾನೆ.

ಕೋಟೆ ನಾಡಿನಲ್ಲಿ ಭೀಕರ ಘಟನೆ, ಹಳೇ ವೈಷಮ್ಯಕ್ಕೆ ಮಹಿಳೆಯನ್ನು ಕೊಚ್ಚಿ, ಕೊಚ್ಚಿ ಬರ್ಬರ ಹತ್ಯೆ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​