AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿಯ ಶಕ್ತಿ ಯೋಜನೆಗೆ ಒಲಿದು ಬಂದ SKOCH ರಾಷ್ಟ್ರೀಯ ಪ್ರಶಸ್ತಿ; ಕಾರ್ಮಿಕ ಕಲ್ಯಾಣಕ್ಕೂ ಪ್ರಶಸ್ತಿ

ಕೆಎಸ್​ಆರ್​ಟಿಸಿಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಕಾರ್ಮಿಕ ಕಲ್ಯಾಣ, ಶಕ್ತಿ ಯೋಜನೆಗಳಿಗೆ ಸ್ಕಾಚ್ ಪ್ರಶಸ್ತಿ ಲಭಿಸಿವೆ. ಇತ್ತೀಚೆಗಷ್ಟೇ, ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಕೆಎಸ್​ಆರ್​​ಟಿಸಿಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ ಲಭಿಸಿತ್ತು.

ಕೆಎಸ್​ಆರ್​ಟಿಸಿಯ ಶಕ್ತಿ ಯೋಜನೆಗೆ ಒಲಿದು ಬಂದ SKOCH ರಾಷ್ಟ್ರೀಯ ಪ್ರಶಸ್ತಿ; ಕಾರ್ಮಿಕ ಕಲ್ಯಾಣಕ್ಕೂ ಪ್ರಶಸ್ತಿ
ಕೆಎಸ್​ಆರ್​ಟಿಸಿಯ ಶಕ್ತಿ ಯೋಜನೆ ಮತ್ತು ಕಾರ್ಮಿಕ ಕಲ್ಯಾಣಗಳಿಗೆ SKOCH ರಾಷ್ಟ್ರೀಯ ಪ್ರಶಸ್ತಿಗಳು
Kiran Surya
| Edited By: |

Updated on: Feb 10, 2024 | 7:25 PM

Share

ಬೆಂಗಳೂರು, ಫೆ.10:ಕೆಎಸ್​ಆರ್​ಟಿಸಿಗೆ (KSRTC) ಮತ್ತೆ ಪ್ರತಿಷ್ಠಿತ SKOCH ಪ್ರಶಸ್ತಿ ಒಲಿದುಬಂದಿದೆ. ಕಾರ್ಮಿಕ ಕಲ್ಯಾಣ, ಶಕ್ತಿ ಯೋಜನೆಗಳಿಗೆ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ. ಇತ್ತೀಚೆಗಷ್ಟೇ, ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ಸಾರಿಗೆ ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಕೆಎಸ್​ಆರ್​​ಟಿಸಿಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ಈ ಪ್ರಶಸ್ತಿ ಒಲಿದುಬಂದಿದೆ.

ಇಂದು ಸ್ಕಾಚ್ ಸಂಸ್ಥೆಯು ದೆಹಲಿಯ ಕಾನ್ಸ್ಟಿಟ್ಯುಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಕಾಚ್ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ಅವರು ನಿಗಮಕ್ಕೆ ಸ್ಕಾಚ್​ನ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಕೆಎಸ್​​ಆರ್​ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ ಪ್ರಕಾಶ್ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದನ್ನೂ ಓದಿ: Ashwamedha Classic buses: ಹೊಸ ಅಶ್ವಮೇಧ ಬಸ್ಸುಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ: ಕೆಎಸ್​ಆರ್​ಟಿಸಿ ಘೋಷಣೆ

ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್