AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್​​ ಎಲ್ ಭೈರಪ್ಪ ಅಂತ್ಯಕ್ರಿಯೆ ಎಲ್ಲಿ? ಯಾವಾಗ?

SL Bhyrappa Funeral: ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲೇ ತಮ್ಮದೇ ಛಾಪು ಮೂಡಿಸಿರುವ ಎಸ್‌ಎಲ್‌ ಭೈರಪ್ಪ ನಮ್ಮನ್ನು ಅಗಲಿದ್ದಾರೆ. ಕನ್ನಡದ ಮೇರು ಸಾಹಿತಿ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ತಮ್ಮ 94ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತ ಕಂಡ ಪ್ರಸಿದ್ಧ ಕಾದಂಬರಿಕಾರ, ತತ್ವಜ್ಞಾನಿ ಹಾಗೂ ಚಿತ್ರಕಥೆಗಾರ ಇನ್ನು ನೆನಪು ಮಾತ್ರ. ಹಾಗೇ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರವಾಗಿವೆ. ಇನ್ನು ಕನ್ನಡ ಸರಸ್ವತಿ ಪುತ್ರನ ಅಂತಿಮ ದರ್ಶನ ಎಲ್ಲೆಲ್ಲಿ? ಅಂತ್ಯಕ್ರಿಯೆ ಯಾವಾಗ? ಎಲ್ಲಿ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್​​ ಎಲ್ ಭೈರಪ್ಪ ಅಂತ್ಯಕ್ರಿಯೆ ಎಲ್ಲಿ? ಯಾವಾಗ?
Sl Bhyrappa
ರಮೇಶ್ ಬಿ. ಜವಳಗೇರಾ
|

Updated on: Sep 24, 2025 | 4:47 PM

Share

ಬೆಂಗಳೂರು/ಮೈಸೂರು, (ಸೆಪ್ಟೆಂಬರ್ 24): ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ (SL Bhyrappa) ವಿಧಿವಶರಾಗಿದ್ದಾರೆ. ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ (SL Bhyrappa Funeral) ಶುಕ್ರವಾರ ಅಂದರೆ ಸೆಪ್ಟೆ.ಬರ್ 26ರಂದು  ಮೈಸೂರಿನ (Mysuru) ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ. ಈ ಬಗ್ಗೆ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್ ಎಲ್ ಭೈರಪ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಭೈರಪ್ಪ ಅವರ ಪಾರ್ತೀವ ಶರೀರವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸಲಾಗಿದ್ದು. ನಾಳೆ (ಸೆಪ್ಟೆಂಬರ್ 25) ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನನ ವ್ಯವಸ್ಥೆ ಮಾಡಲಾಗುತ್ತದೆ.

ಇದನ್ನೂ ಓದಿ:  ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆ:ಕಾದಂಬರಿಗಳು ಅಜರಾಮರ

ಇನ್ನು ನಾಳೆ (ಸೆಪ್ಟೆಂಬರ್ 25) ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆಯಾದರೂ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರ. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ. ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?