AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ಘೋಷಣೆ

ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ನೀಡುವ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ಘೋಷಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ
ಸಾಧು ಶ್ರೀನಾಥ್​
|

Updated on:May 08, 2021 | 9:12 AM

Share

ಮಂಡ್ಯ: ಜಿಲ್ಲೆಯ ಜನತೆಗೆ ಕೋವಿಡ್​ ಸಂಕಷ್ಟ ಕಾಲದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕರು ನೆರವಿನ ಹಸ್ತ ಚಾಚಿಸಿದ್ದಾರೆ. ಮೊನ್ನೆಯಷ್ಟೇ ಜಿಲ್ಲೆಯ ಹಾಲಿ ಸಂಸದೆ ಸುಮಲತಾ ಅಂಬರೀಷ್​ ಅವರು ಜಂಬೋ ಆಕ್ಸಿಜನ್​ ಸಪ್ಲೆ ಮಾಡುವ ವಾಗ್ದಾನ ನೀಡಿ, ಅದರಂತೆ ಜಿಲ್ಲೆಗೆ ಆತ್ಯಗತ್ಯವಾಗಿರುವ ಜೀವವಾಯುವನ್ನು ಕಳುಹಿಸಿಕೊಟ್ಟಿದ್ದರು. ಇದೀಗ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನೆರವಾಗಲು ಮುಂದೆ ಬಂದಿದ್ದಾರೆ.

ಮಂಡ್ಯ ಜಿಲ್ಲೆಗೆ 100 ಜಂಬೋ ಆಕ್ಸಿಜನ್ ಸಿಲಿಂಡರ್​ಗಳು ಮತ್ತು ಆರೋಗ್ಯ ಕಾರ್ಯಕರ್ತರಿಗಾಗಿ 10 ಸಾವಿರ ಎನ್-95 ಮಾಸ್ಕ್ ವಿತರಿಸಲು ಮಾಜಿ ಸಿಎಂ ಎಸ್.ಎಂ.ಕೃಷ್ಣ ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ ಸಿ ನಾರಾಯಣಗೌಡ ಮೂಲಕ ಈ ನೆರವು ಸಕಾಲಕ್ಕೆ ಜನಕ್ಕೆ ತಲುಪುವ ವ್ಯವಸ್ಥೆ ಮಾಡಲು ಎಸ್.ಎಂ. ಕೃಷ್ಣ ನಿರ್ಧರಿಸಿದ್ದಾರೆ.

ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ನೀಡುವ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿಸಿದ್ದಾರೆ.

SM Krishna help to corona warriors in mandya district (1) (1)

ಮಂಡ್ಯ ಜಿಲ್ಲೆ ಜನತೆಗೆ ಕೋವಿಡ್​ ನೆರವು ನೀಡುವ ಬಗ್ಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿಸಿದ್ದಾರೆ.

(SM Krishna help to corona warriors in mandya district)

ನುಡಿದಂತೆ ನಡೆದ ಸಂಸದೆ ಸುಮಲತಾ; ಮಂಡ್ಯಕ್ಕೆ ಬಂತು 2 ಸಾವಿರ ಲೀಟರ್ ಸಾಮರ್ಥ್ಯದ 20 ಜಂಬೋ ಆಕ್ಸಿಜನ್ ಸಿಲಿಂಡರ್

Published On - 9:11 am, Sat, 8 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More