AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಡಿಕೆ ಶಿವಕುಮಾರ್​ಗೆ ಎಸ್​ಎಂ ಕೃಷ್ಣ ಪತ್ರ

ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ,

Mekedatu Padayatra: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಡಿಕೆ ಶಿವಕುಮಾರ್​ಗೆ ಎಸ್​ಎಂ ಕೃಷ್ಣ ಪತ್ರ
ಡಿಕೆ ಶಿವಕುಮಾರ್, ಎಸ್​ಎಂ ಕೃಷ್ಣ
TV9 Web
| Edited By: |

Updated on:Jan 16, 2022 | 3:30 PM

Share

ಬೆಂಗಳೂರು: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಹಮತ ಇದೆ. ಆದರೆ, ಇದು ಸೂಕ್ತ ಸಮಯವಲ್ಲ ಎಂದು ಎಸ್​.ಎಂ. ಕೃಷ್ಣ ಪತ್ರದ ಮುಖೇನ ತಿಳಿಸಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ (Mekedatu Padayatra) ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ (Karnataka Govt) ಸಿ.ಎಸ್‌. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ‌ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಪಾದಯಾತ್ರೆ ತಡೆಯುತ್ತೇವೆಂದು ಕೋರ್ಟ್​​ಗೆ ಅಫಿಡವಿಟ್ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದೆ. ಪಾದಯಾತ್ರೆ ನಡೆಸದಂತೆ ಈವರೆಗೆ ನೀಡಿದ ನೋಟಿಸ್​ಗಳು, ಸೂಚನೆಗಳು, ಮೌಖಿಕ ಮನವಿ, ದಾಖಲಿಸಿರುವ FIR ಸೇರಿ ಎಲ್ಲ ವಿವರ ಒಳಗೊಂಡ ಅಫಿಡವಿಟ್​ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಸಚಿವರು, ಅಧಿಕಾರಿಗಳ ಜತೆ ಚರ್ಚೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ‌, ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಆರ್‌.ಅಶೋಕ್, ಡಾ.ಸುಧಾಕರ್, ಸಿಎಸ್ ರವಿಕುಮಾರ್, ಡಿಜಿ & ಐಜಿಪಿ ಸೂದ್, ಎಜಿ ನಾವದಗಿ ಜತೆ ಸಿಎಂ ಚರ್ಚೆ ಮಾಡಿದ್ದಾರೆ. ಸರ್ಕಾರದ ಮುಂದಿನ ನಿಲುವಿನ ಬಗ್ಗೆ ಬೊಮ್ಮಾಯಿ ಚರ್ಚಿಸಿದ್ದು ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಕ್ರಮದ ಬಗ್ಗೆ ಮಾತುಕತೆ ನಡೆಸಲಾಗಿದೆ. ಕ್ರಮಕೈಗೊಳ್ಳುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡದಂತೆ ಬಿಜೆಪಿ ಶಾಸಕರ ಒತ್ತಡ; ಬಿಜೆಪಿ ನಾಯಕರು ಹೇಳಿದ್ದೇನು?

ಇದನ್ನೂ ಓದಿ: Mekedatu Padayatra: ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ

Published On - 9:50 pm, Wed, 12 January 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ