AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಜಿಎಸ್‌ಟಿ ನೋಟಿಸ್‌ನಿಂದ ಉಂಟಾಗಿದ್ದ ಗೊಂದಲಗಳನ್ನು ನಿವಾರಿಸಲಾಗಿದೆ. ಹಳೆ ತೆರಿಗೆ ಬಾಕಿಯನ್ನು ಸಂಪೂರ್ಣವಾಗಿ ಮನ್ನಾ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಸಣ್ಣ ವ್ಯಾಪಾರಿಗಳು ಫುಲ್ ಖುಷ್ ಆಗಿದ್ದು, ಜುಲೈ 25ರಂದು ಕರೆ ನೀಡಲಾಗಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.

ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್
Small Traders
ರಮೇಶ್ ಬಿ. ಜವಳಗೇರಾ
|

Updated on: Jul 23, 2025 | 7:04 PM

Share

ಬೆಂಗಳೂರು, (ಜುಲೈ 23): ಸಣ್ಣ ವ್ಯಾಪಾರಿಗಳಿಗೆ (small traders) ಜಿಎಸ್ಟಿ (GST)ನೋಟಿಸ್ ವಿರೋಧಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್‌ ಜುಲೈ 25ರಂದು ಕರೆ ನಿಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಜಿಎಸ್‌ಟಿ ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಣ್ಣ ವರ್ತಕರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದು, ಸಿಎಂ ಸಿದ್ದರಾಮಯ್ಯನವರ ನಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ವರ್ತಕರ ತೆರಿಗೆ ಹಣವನ್ನು ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ ಸಣ್ಣ ವ್ಯಾಪಾರಿಗಳು ಜುಲೈ 25ರಂದು ಕರೆ ನೀಡಿದ್ದ ಬಂದ್ ವಾಪಸ್ ಪಡೆದುಕೊಂಡಿದ್ದಾರೆ. ಈ ಸಂಬಂಧ ಸಣ್ಣ ಪುಟ್ಟ ವ್ಯಾಪಾರಿಗಳ ಹೋರಾಟದ ನೇತೃತ್ವ ವಹಿಸಿದ್ದ ಕಾರ್ಮಿಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿ ಶೆಟ್ಟಿ ಬೈಂದೂರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸರ್ಕಾರದ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈಬಿಡುವುದಾಗಿ ಘೋಷಿಸಿದರು.

ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್‌:ನೋಟಿಸ್ ನೀಡಿದ್ರೂ ತೆರಿಗೆ ವಸೂಲಿ ಮಾಡಲ್ಲ, ಸಿಎಂ ಸ್ಪಷ್ಟನೆ

ಮೊದಲನೆಯದಾಗಿ ನಾವು ಈ ಕಪ್ಪು ಪಟ್ಟಿಯನ್ನು ವಾಪಸ್ಸು ತೆಗೆಯುತ್ತಿದ್ದೇವೆ . ಸರ್ಕಾರದ ಮರಣ ಶಾಸನ ಕೊನೆಗಾಣಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಸರ್ಕಾರ ಯಾವುದೇ ಷರತ್ತು ಹಾಕದೆ ಎಲ್ಲ ನೊಟೀಸ್ ವಾಪಸ್ ತೆಗೆದುಕೊಳ್ಳಲು ನಿರ್ಧಾರ ಮಾಡಿದೆ ಎಂದು ನನಗೆ ಮಾಹಿತಿ ಸಿಕ್ಕಿದೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲೇ ನಾಳೆ ಫ್ರೀಡಂ ಪಾರ್ಕಿನಲ್ಲಿ ಲಕ್ಷಾಂತರ ಜನ ಸೇರುತ್ತಿದ್ದರು. ಸರ್ಕಾರ ಮತ್ತೆ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದ ರೀತಿ ನೋಡಿಕೊಳ್ಳಬೇಕು . ನಮ್ಮ ಹಲವು ದಿನಗಳ ಹೋರಾಟ ನಿಜಕ್ಕೂ ಒಂದು ಸುಖಾಂತ್ಯ ಕಂಡಿದೆ. ಇದಕ್ಕೆ ಖುಷಿ ಆಗುತ್ತಿದೆ ಎಂದು ಭಾವೋದ್ವೇಗಕ್ಕೆ ಒಳಗಾದರು.

ಈ ಕುರಿತು ಚಿಕ್ಕಪೇಟೆ ಟ್ರೇಡರ್ಸ್ ವರ್ತಕರ ಸಂಘದ ಸದಸ್ಯ ಸಜ್ಜನ್ ಮೆಹತಾ ಟಿವಿ9ಗೆ ಪ್ರತಿಕ್ರಿಯಿಸಿ, FKCCI ಸೇರಿದಂತೆ ಹಲವು ಸಂಘ ಸಂಸ್ಥೆಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಹೀಗಾಗಿ ಪ್ರತಿಭಟನೆ, ರ್ಯಾಲಿ ನಮ್ಮ ಅಸೋಸಿಯೇಷನ್ ವಾಪಾಸ್ ಪಡೆದಿದೆ. ಬಂದ್ ಮಾಡಿದ್ರೆ ಬೆಂಗಳೂರಿನ ಬ್ಯುಸಿನೆಸ್ ಹಾಳಾಗುತ್ತೆ. ನಮ್ಮ ಬ್ಯುಸಿನೆಸ್ ತುಮಕೂರಿಗೆ ಹೋಗುತ್ತೆ. ಸರ್ಕಾರ 40 ಲಕ್ಷದಿಂದ 5 ಕೋಟಿ ರೂ.ವರೆಗೆ ಇದ್ದವರಿಗೆ ನೋಟಿಸ್ ಕೊಟ್ಟಿದೆ. ಹಳೆ ಅರಿಯರ್ಸ್ ಪರಿಹಾರ ಮಾಡುತ್ತಾರೆ. ಸಿಎಂ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಹೀಗಾಗಿ ನಾಳೆಯ ಪ್ರತಿಭಟನೆ ಕೈ ಬಿಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಈ ರಾಶಿಯವರು ಅತ್ಯಂತ ಜಾಗರೂಕರಾಗಿರಿ!
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ಹೇ ಸ್ಟಾಪ್: ಬಸ್​​​ಗಳನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿದ ಒಂಟಿ ಸಲಗ
ರಣಜಿ ಫೈನಲ್; ಸ್ಮರಣೀಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್
ರಣಜಿ ಫೈನಲ್; ಸ್ಮರಣೀಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್