ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಹಾಕಿ ಸ್ಮಗ್ಲರ್ ಎಸ್ಕೇಪ್: 3.5 ಕೆಜಿ ಚಿನ್ನ ಪತ್ತೆ

ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವರ ಭಯಗೊಂಡು ಮಾರ್ಗ ಮಧ್ಯೆದಲ್ಲೇ ಚಿನ್ನ ಬಿಸ್ಕೆಟ್ ಸಹ ಪ್ರಯಾಣಿಕನ ಬ್ಯಾಗ್​ ಗೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ. ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲಾಕ್ಕೊಳ್ಳುವ ಭಯದಿಂದ ಬೇರೆಯವರ ಟ್ರಾಲಿ ಬ್ಯಾಗ್​​ ಗೆ ಚಿನ್ನ ಹಾಕಿ ಎಸ್ಪೇಪ್ ಆಗಿದ್ದಾನೆ. ಹಾಗಾದ್ರೆ, ಸ್ಮಗ್ಲರ್​ ಖರ್ತನಾಕ್​ ಐಡಿಯಾಕ್ಕೆ ಸಹ ಪ್ರಯಾಣಿಕ ಸಿಕ್ಕಿಬಿದ್ದಿದ್ಗೇಗೆ? ಬ್ಯಾಗ್​ ನಲ್ಲಿ ಸಿಕ್ಕ ಚಿನ್ನ ಎಷ್ಟು? ಎನ್ನುವ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಹಾಕಿ ಸ್ಮಗ್ಲರ್ ಎಸ್ಕೇಪ್: 3.5 ಕೆಜಿ ಚಿನ್ನ ಪತ್ತೆ
Gold
Edited By:

Updated on: Jul 25, 2025 | 5:56 PM

ಬೆಂಗಳೂರು, (ಜುಲೈ 25): ದುಬೈ (Dubai) ಪ್ಯಾಸೆಂಜರ್ ಬ್ಯಾಗ್‌ಗೆ 3.5 ಕೆಜಿ ಚಿನ್ನದ (Gold) ಬಿಸ್ಕೆಟ್ ಗಳನ್ನು ಹಾಕಿ ಸ್ಮಗ್ಲರ್ ಎಸ್ಪೇಪ್ ಆಗಿರುವ ಘಟನೆ ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಡೆದಿದೆ. ಬ್ಯಾಗ್ ಮಾಲೀಕ ತನ್ನ ಟ್ರ್ಯಾಲಿಯನ್ನು ಎಳೆದುಕೊಂಡು ಹೋಗುವಾಗ ಚಿನ್ನ ಬ್ಯಾಗ್ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಮಾಲೀಕ ಕೂಡಲೇ ಚಿನ್ನದ ಬ್ಯಾಗ್‌ನ್ನು ಡಿಆರ್‌ಐ ಅಧಿಕಾರಿಗಳ ಬಳಿ ತೆಗೆದುಕೊಂಡು ಹೋಗಿದ್ದಾರೆ. ಆಗ ಅಧಿಕಾರಿಗಳು ಬ್ಯಾಗ್ ಪರಿಶೀಲನೆ ಮಾಡಿದಾಗ 3.5 ಕೆಜಿ ಚಿನ್ನದ ಬಿಸ್ಕೆಟ್ ಇರುವುದು ಪತ್ತೆಯಾಗಿದೆ.

ಅಧಿಕಾರಿಗಳು ಮಾಲೀಕನ ವಿಚಾರಣೆ ನಡೆಸಿದಾಗ ಚಿನ್ನಕ್ಕೂ ಆತನಿಗೂ ಯಾವುದೇ ಸಂಬಂಧ ಇಲ್ಲ ಎನ್ನುವುದು ಬಹಿರಂಗ ಆಗಿದೆ. ಬಳಿಕ ಸ್ಮಗ್ಲರ್, ಪ್ರಯಾಣಿಕನ ಬ್ಯಾಗ್‌ಗೆ ಚಿನ್ನ ಪರಾರಿಯಾಗಿರುವುದು ತಿಳಿದುಬಂದಿದ್ದು, ಸದ್ಯ ಡಿಆರ್‌ಐ ಅಧಿಕಾರಿಗಳು (DRI Officers) ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಸ್ಮಗ್ಲರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

Published On - 5:55 pm, Fri, 25 July 25

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us