Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಹಾವು ಕಡಿತವನ್ನೂ ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ
ಹಾವು
Follow us
ವಿವೇಕ ಬಿರಾದಾರ
|

Updated on:Feb 20, 2024 | 10:49 AM

ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಆರೋಗ್ಯ ಇಲಾಖೆಯು (Karnataka Health Department) ಹಾವು ಕಡಿತವನ್ನೂ (Snakebite) ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ 2023-24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಾವು ಕಡಿತ ಚಿಕಿತ್ಸೆಗೆ ಒಳರೋಗಿ, ಹೊರರೋಗಿಯಾಗಿ ದಾಖಲಾದವರು, ಮರಣ ಉಂಟಾದ ಪ್ರಕರಣಗಳು ಸಹಿತ ಎಲ್ಲ ಮಾಹಿತಿಗಳನ್ನು ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ವೈದ್ಯಕೋಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಭಾರತ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.

ಇದನ್ನೂ ಓದಿ: ಬೈಕ್ ಓಡಿಸುವಾಗ ಏನೋ ಸಪ್ಪಳ ಬಂತೆಂದು ನೋಡಿದ್ರೆ ನಾನೇ ಎಂದು ಹೆಲ್ಮೆಟ್​ನಿಂದ ಇಣುಕಿದ ನಾಗರ ಹಾವು

ಹಾವು ಕಡಿತವನ್ನು ಯಶಸ್ವಿಯಾಗಿ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಯಾವುದೇ ಮಧ್ಯಸ್ಥಿಕೆಗಾಗಿ, ಅದರ ಹರಡುವಿಕೆಯ ದತ್ತಾಂಶ ಸಂಗ್ರಹವು ಮೊದಲ ಹೆಜ್ಜೆಯಾಗಿದೆ. ಈ ರೋಗದ ವರದಿಯನ್ನು ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಉತ್ತಮ ಹೆಜ್ಜೆ ಅನುಸರಿಸಿದೆ.

ಸೆಂಟರ್ ಫಾರ್ ಒನ್ ಹೆಲ್ತ್ ಅಟ್ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಚಟುವಟಿಕೆಗಳ ಅನುಷ್ಠಾನವನ್ನು ಸಮನ್ವಯಗೊಳಿಸುತ್ತಿದೆ. ಈ ಕ್ಷೇತ್ರದ ಸಂಬಂಧಿತ ತಜ್ಞರೊಂದಿಗೆ ಸಮಾಲೋಚಿಸಿ ಸರ್ಕಾರ ‘ಒನ್ ಹೆಲ್ತ್ ಅಪ್ರೋಚ್’ನೊಂದಿಗೆ ಹಾವು ಕಡಿತ  ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ’ ಅನ್ನು ರಚಿಸಿದೆ. ಎನ್​ಎಪಿಎಸ್​ಇ ಯ ಉದ್ದೇಶವು ಭಾರತದಲ್ಲಿ 2030 ರ ವೇಳೆಗೆ ಹಾವು ಕಡಿತಕ್ಕೆ ಸಂಬಂಧಿಸಿದ ಮರಣ ಮತ್ತು ಅಂಗವೈಕಲ್ಯವನ್ನು ಅರ್ಧದಷ್ಟು ಕಡಿಮೆ ಮಾಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Tue, 20 February 24

ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್