AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಹಾವು ಕಡಿತವನ್ನೂ ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ
ಹಾವು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 20, 2024 | 10:49 AM

Share

ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಆರೋಗ್ಯ ಇಲಾಖೆಯು (Karnataka Health Department) ಹಾವು ಕಡಿತವನ್ನೂ (Snakebite) ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ 2023-24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಾವು ಕಡಿತ ಚಿಕಿತ್ಸೆಗೆ ಒಳರೋಗಿ, ಹೊರರೋಗಿಯಾಗಿ ದಾಖಲಾದವರು, ಮರಣ ಉಂಟಾದ ಪ್ರಕರಣಗಳು ಸಹಿತ ಎಲ್ಲ ಮಾಹಿತಿಗಳನ್ನು ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ವೈದ್ಯಕೋಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಭಾರತ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.

ಇದನ್ನೂ ಓದಿ: ಬೈಕ್ ಓಡಿಸುವಾಗ ಏನೋ ಸಪ್ಪಳ ಬಂತೆಂದು ನೋಡಿದ್ರೆ ನಾನೇ ಎಂದು ಹೆಲ್ಮೆಟ್​ನಿಂದ ಇಣುಕಿದ ನಾಗರ ಹಾವು

ಹಾವು ಕಡಿತವನ್ನು ಯಶಸ್ವಿಯಾಗಿ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಯಾವುದೇ ಮಧ್ಯಸ್ಥಿಕೆಗಾಗಿ, ಅದರ ಹರಡುವಿಕೆಯ ದತ್ತಾಂಶ ಸಂಗ್ರಹವು ಮೊದಲ ಹೆಜ್ಜೆಯಾಗಿದೆ. ಈ ರೋಗದ ವರದಿಯನ್ನು ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಉತ್ತಮ ಹೆಜ್ಜೆ ಅನುಸರಿಸಿದೆ.

ಸೆಂಟರ್ ಫಾರ್ ಒನ್ ಹೆಲ್ತ್ ಅಟ್ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಚಟುವಟಿಕೆಗಳ ಅನುಷ್ಠಾನವನ್ನು ಸಮನ್ವಯಗೊಳಿಸುತ್ತಿದೆ. ಈ ಕ್ಷೇತ್ರದ ಸಂಬಂಧಿತ ತಜ್ಞರೊಂದಿಗೆ ಸಮಾಲೋಚಿಸಿ ಸರ್ಕಾರ ‘ಒನ್ ಹೆಲ್ತ್ ಅಪ್ರೋಚ್’ನೊಂದಿಗೆ ಹಾವು ಕಡಿತ  ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ’ ಅನ್ನು ರಚಿಸಿದೆ. ಎನ್​ಎಪಿಎಸ್​ಇ ಯ ಉದ್ದೇಶವು ಭಾರತದಲ್ಲಿ 2030 ರ ವೇಳೆಗೆ ಹಾವು ಕಡಿತಕ್ಕೆ ಸಂಬಂಧಿಸಿದ ಮರಣ ಮತ್ತು ಅಂಗವೈಕಲ್ಯವನ್ನು ಅರ್ಧದಷ್ಟು ಕಡಿಮೆ ಮಾಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Tue, 20 February 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ