ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಹಾವು ಕಡಿತವನ್ನೂ ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ
ಹಾವು
Follow us
|

Updated on:Feb 20, 2024 | 10:49 AM

ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಆರೋಗ್ಯ ಇಲಾಖೆಯು (Karnataka Health Department) ಹಾವು ಕಡಿತವನ್ನೂ (Snakebite) ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ 2023-24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಾವು ಕಡಿತ ಚಿಕಿತ್ಸೆಗೆ ಒಳರೋಗಿ, ಹೊರರೋಗಿಯಾಗಿ ದಾಖಲಾದವರು, ಮರಣ ಉಂಟಾದ ಪ್ರಕರಣಗಳು ಸಹಿತ ಎಲ್ಲ ಮಾಹಿತಿಗಳನ್ನು ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ವೈದ್ಯಕೋಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಭಾರತ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.

ಇದನ್ನೂ ಓದಿ: ಬೈಕ್ ಓಡಿಸುವಾಗ ಏನೋ ಸಪ್ಪಳ ಬಂತೆಂದು ನೋಡಿದ್ರೆ ನಾನೇ ಎಂದು ಹೆಲ್ಮೆಟ್​ನಿಂದ ಇಣುಕಿದ ನಾಗರ ಹಾವು

ಹಾವು ಕಡಿತವನ್ನು ಯಶಸ್ವಿಯಾಗಿ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಯಾವುದೇ ಮಧ್ಯಸ್ಥಿಕೆಗಾಗಿ, ಅದರ ಹರಡುವಿಕೆಯ ದತ್ತಾಂಶ ಸಂಗ್ರಹವು ಮೊದಲ ಹೆಜ್ಜೆಯಾಗಿದೆ. ಈ ರೋಗದ ವರದಿಯನ್ನು ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಉತ್ತಮ ಹೆಜ್ಜೆ ಅನುಸರಿಸಿದೆ.

ಸೆಂಟರ್ ಫಾರ್ ಒನ್ ಹೆಲ್ತ್ ಅಟ್ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಚಟುವಟಿಕೆಗಳ ಅನುಷ್ಠಾನವನ್ನು ಸಮನ್ವಯಗೊಳಿಸುತ್ತಿದೆ. ಈ ಕ್ಷೇತ್ರದ ಸಂಬಂಧಿತ ತಜ್ಞರೊಂದಿಗೆ ಸಮಾಲೋಚಿಸಿ ಸರ್ಕಾರ ‘ಒನ್ ಹೆಲ್ತ್ ಅಪ್ರೋಚ್’ನೊಂದಿಗೆ ಹಾವು ಕಡಿತ  ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ’ ಅನ್ನು ರಚಿಸಿದೆ. ಎನ್​ಎಪಿಎಸ್​ಇ ಯ ಉದ್ದೇಶವು ಭಾರತದಲ್ಲಿ 2030 ರ ವೇಳೆಗೆ ಹಾವು ಕಡಿತಕ್ಕೆ ಸಂಬಂಧಿಸಿದ ಮರಣ ಮತ್ತು ಅಂಗವೈಕಲ್ಯವನ್ನು ಅರ್ಧದಷ್ಟು ಕಡಿಮೆ ಮಾಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Tue, 20 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ