AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಹಿಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ ಎಂದು ಹೇಳಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR:ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 27, 2024 | 4:57 PM

Share

ಚಾಮರಾಜನಗರ, ಸೆಪ್ಟೆಂಬರ್ 27: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯ ಸೂಚಿಸಿದ್ದ ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು,  ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದ ಸ್ನೇಹಮಹಿ ಕೃಷ್ಣ 

ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್​ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್​ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.

ಒಂದು ಮೊಬೈಲ್ ಫೋನ್​ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್​ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು?

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲವೆಂಬ ಸಿಎಂ ಹೇಳಿದ್ದಾರೆ. ಒಂದೊಂದು ಸಮಯದಲ್ಲಿ ಸಿದ್ದರಾಮಯ್ಯ ಒಂದೊಂದು ರೀತಿ ವರ್ತಿಸಿದ್ದಾರೆ. ಬೇರೆಯವರ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದರು. ಆದರೆ ತಮ್ಮ ವಿರುದ್ದ ದೂರು ದಾಖಲಾದಾಗ ಉಲ್ಟಾ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ನೈತಿಕ ಬೆಲೆ ಹೊತ್ತು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Fri, 27 September 24

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ